AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಯಾತ್ರೆ ಅಂದ್ರೆ ಓಡೋದು, ಬಸ್ಕಿ ಹೊಡಿಸೋದಲ್ಲ, ಗಾಂಭೀರ್ಯ ಬೇಕು: ಕಾಂಗ್ರೆಸ್ ಪಾದಯಾತ್ರೆಗೆ ಸಚಿವ ಆರ್ ಅಶೋಕ್ ವ್ಯಂಗ್ಯ

ಜನರು ಮಾತನಾಡುವುದನ್ನೇ ಯಡಿಯೂರಪ್ಪ ಹೇಳಿದ್ದಾರೆ. ಪಾದಯಾತ್ರೆಗೆ ಒಂದು ಗಾಂಭೀರ್ಯ ಇರಬೇಕು ಎಂದು ಪುನರುಚ್ಚರಿಸಿದರು.

ಪಾದಯಾತ್ರೆ ಅಂದ್ರೆ ಓಡೋದು, ಬಸ್ಕಿ ಹೊಡಿಸೋದಲ್ಲ, ಗಾಂಭೀರ್ಯ ಬೇಕು: ಕಾಂಗ್ರೆಸ್ ಪಾದಯಾತ್ರೆಗೆ ಸಚಿವ ಆರ್ ಅಶೋಕ್ ವ್ಯಂಗ್ಯ
ಕಂದಾಯ ಸಚಿವ ಆರ್ ಅಶೋಕ
TV9 Web
| Edited By: |

Updated on: Oct 13, 2022 | 3:09 PM

Share

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ (Bharat Jodo Yatra) ಬಗ್ಗೆ ಸಚಿವ ಆರ್.ಆಶೋಕ್ (R Ashok) ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಎಂದರೆ ಓಡೋದು, ಬಸ್ಕಿ ಹೊಡಿಸೋದು ಎಂಬಂತೆ ಆಗಿದೆ. ಪಾದಯಾತ್ರೆ ಎಂದರೆ ಅದಕ್ಕೆ ತನ್ನದೇ ಆದ ಒಂದು ಗಾಂಭೀರ್ಯ ಇರಬೇಕು. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಮಗ ರಾಹುಲ್ ಗಾಂಧಿಯನ್ನು ನೋಡಲು ತಾಯಿ ಸೋನಿಯಾ (Sonia Gandhi) ಬಂದು ಹೋಗಿದ್ದಾರೆ. ಅದೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದರೆ ಸೋನಿಯಾ ಬರಲಿಲ್ಲ. ಇದು ಮಗನ ಮೇಲಿನ ಪ್ರೀತಿಗೆ ಬಂದು ಹೋದ ವೈಖರಿಯಷ್ಟೇ ಎಂದು ಅಶೋಕ್ ವಿಶ್ಲೇಷಿಸಿದರು.

ಯಡಿಯೂರಪ್ಪನವರು 50 ವರ್ಷ ಪಾದಯಾತ್ರೆ ಮಾಡಿದ್ದಾರೆ. ಜನರು ಮಾತನಾಡುವುದನ್ನೇ ಯಡಿಯೂರಪ್ಪ ಹೇಳಿದ್ದಾರೆ. ಪಾದಯಾತ್ರೆಗೆ ಒಂದು ಗಾಂಭೀರ್ಯ ಇರಬೇಕು ಎಂದು ಪುನರುಚ್ಚರಿಸಿದರು. ಯಡಿಯೂರಪ್ಪ, ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ನಾಯಕರು ಸವಾಲು ಹಾಕಿರುವ ಬಗ್ಗೆ ಅವರೇ ಮಾತನಾಡಲಿದ್ದಾರೆ ಎಂದು ಅಶೋಕ್ ಹೇಳಿದರು.

ಹಿಜಾಬ್​ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ಭಿನ್ನ ತೀರ್ಪು ಬಂದಿದೆ. ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾಗುವುದಿಲ್ಲ. ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಧರಿಸಲಿ. ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ ಎಂದರು.

ಈ ಮೊದಲು ಹೈಕೋರ್ಟ್ ಸರ್ಕಾರದ ಪರವಾಗಿ ತೀರ್ಪು ನೀಡಿತ್ತು. ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿಯೂ ಸರ್ಕಾರವು ಈ ಮೊದಲಿನಂತೆ ತನ್ನ ನಿಲುವು ಸ್ಪಷ್ಟಪಡಿಸಲಿದೆ. ಅಲ್ಲಿ ಕೂಡಾ ಸರ್ಕಾರದ ನಿಲುವು ಇದೇ ರೀತಿ ಇರುತ್ತದೆ. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಹಾಕಲಿ. ಆದರೆ ಶಾಲೆಯಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಿಗೂ ಸಮವಸ್ತ್ರದ ಸಂಹಿತೆ ಇದೆ. ಅಲ್ಲಿಯೂ ಅದು ಪಾಲನೆಯಾಗುತ್ತದೆ. ಇರಾನ್​ನಲ್ಲಿ ಮುಸ್ಲಿಮ್ ಯುವತಿಯರೇ ಹಿಜಾಬ್ ಕಿತ್ತು ಬಿಸಾಡುತ್ತಿದ್ದಾರೆ ಎಂದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ