AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಣೆಯಲ್ಲಿ ಶಿಂಧೆ ಬಣ ಸೇರಿದ 66 ಮಾಜಿ ಕೌನ್ಸಿಲರ್​​ಗಳು; ಠಾಕ್ರೆ ಬಣದಲ್ಲಿ ಉಳಿದಿರುವುದು ಒಬ್ಬರೇ

ಕೌನ್ಸಿಲರ್​​ಗಳ ಅಧಿಕಾರವಧಿ ಮುಗಿದಿದ್ದು, ಇನ್ನು ಚುನಾವಣೆ ಬಾಕಿ ಇದೆ. ಮುಂಬೈಯ ಬೃಹನ್ಮುಂಬೈ ಕಾರ್ಪೊರೇಷನ್ ನಂತರ ಥಾಣೆ ಮಹಾರಾಷ್ಟ್ರದಲ್ಲಿನ ಪ್ರತಿಷ್ಠಿತ ನಾಗರಿಕ ಸಂಸ್ಥೆಯಾಗಿದೆ

ಥಾಣೆಯಲ್ಲಿ ಶಿಂಧೆ ಬಣ ಸೇರಿದ 66 ಮಾಜಿ ಕೌನ್ಸಿಲರ್​​ಗಳು; ಠಾಕ್ರೆ ಬಣದಲ್ಲಿ ಉಳಿದಿರುವುದು ಒಬ್ಬರೇ
ಏಕನಾಥ್ ಶಿಂಧೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 07, 2022 | 8:25 PM

ಮುಂಬೈ: ಶಿವಸೇನಾದಲ್ಲಿನ ಬಂಡಾಯ ಇದೀಗ ಉದ್ಧವ್ ಠಾಕ್ರೆಗೆ(Uddhav Thackeray) ಮತ್ತಷ್ಟು ಹೊಡೆತ ನೀಡಿದೆ. ಥಾಣೆಯಲ್ಲಿ (Thane) 67 ಮಾಜಿ ಕೌನ್ಸಿಲರ್​​ಗಳ ಪೈಕಿ 66 ಮಂದಿ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಬಣಕ್ಕೆ ಸೇರಿದ್ದಾರೆ. ನಿನ್ನೆ ಸಂಜೆ ಮಾಜಿ ಕೌನ್ಸಿಲರ್​​ಗಳು ಶಿಂಧೆ ಅವರನ್ನು ಭೇಟಿ ಮಾಡಿದ್ದರು. ಕೌನ್ಸಿಲರ್​​ಗಳ ಅಧಿಕಾರವಧಿ ಮುಗಿದಿದ್ದು, ಇನ್ನು ಚುನಾವಣೆ ಬಾಕಿ ಇದೆ. ಮುಂಬೈಯ ಬೃಹನ್ಮುಂಬೈ ಕಾರ್ಪೊರೇಷನ್ ನಂತರ ಥಾಣೆ ಮಹಾರಾಷ್ಟ್ರದಲ್ಲಿನ ಪ್ರತಿಷ್ಠಿತ ನಾಗರಿಕ ಸಂಸ್ಥೆಯಾಗಿದೆ. ಮುಂಬೈಯಲ್ಲಿ ಶಿವಸೇನಾ ಅಧಿಪತ್ಯ ಹೊಂದಿದ್ದು , ಥಾಣೆಯಲ್ಲಿ ಶಿಂಧೆ ಪ್ರಭಾವಿಯಾಗಿದ್ದಾರೆ.ಏಕನಾಥ್ ಶಿಂಧೆ ಬಂಡಾಯದಿಂದಾಗಿ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರಿಗೆ ಮಾಜಿ ಕೌನ್ಸಿಲರ್​​ಗಳ ಈ ನಡೆ ನಿರೀಕ್ಷಿತವೇ ಆಗಿದೆ. ಶಿಂಧೆ ಬಣ ಈಗ ಬಾಳಾಸಾಹೇಬ್ ಠಾಕ್ರೆ ಅವರು ಸ್ಥಾಪಿಸಿದ ಶಿವಸೇನಾ ಮೇಲೆ ಸಂಪೂರ್ಣ ಅಧಿಕಾರ ಪಡೆಯಲು ಹವಣಿಸುತ್ತಿದೆ. ತಾವು ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುನ್ನಡೆಸುತ್ತಿದ್ದೇವೆ ಎಂದು ಶಿಂಧೆ ಬಣ ಹೇಳುತ್ತಿದೆ. ಅದೇ ವೇಳೆ ಪಕ್ಷದ ಮೂರನೇ ಎರಡರಷ್ಟು ಶಾಸಕರನ್ನು ತಮ್ಮ ಬಣ ಹೊಂದಿರುವುದರಿಂದ ನಾವೇ ನಿಜವಾದ ಶಿವಸೇನಾ ಎಂದು ಶಿಂಧೆ ಬಣ ವಿಧಾನಸಭೆ ಮತ್ತು ಸುಪ್ರೀಂಕೋರ್ಟ್ ನಲ್ಲಿ ಹೇಳಿದೆ.

ಶಿವಸೇನಾದ 55ಶಾಸಕರ ಪೈಕಿ 44 ಮಂದಿ ಈಗ ಶಿಂಧೆ ಬಣದಲ್ಲಿದ್ದಾರೆ. ಇದೀಗ ಸ್ಥಳೀಯ ನಾಯಕರು, ಕಾರ್ಯಕರ್ತರು ಮತ್ತು ಕಾರ್ಪೊರೇಟರ್ ಗಳನ್ನು ತಮ್ಮ ಬಣಕ್ಕೆ ಸೇರಿಸಿ ಅದನ್ನು ಮತ್ತಷ್ಟು ಬಲಗೊಳಿಸಲು ಶಿಂಧೆ ಪ್ರಯತ್ನಿಸುತ್ತಿದ್ದಾರೆ.

Published On - 8:17 pm, Thu, 7 July 22

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ