AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ: ಕಾಂಗ್ರೆಸ್​ಗೇ ತಿರುಗುಬಾಣವಾಗಿಸಲು ತಂತ್ರ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ್ದ ಹೇಳಿಕೆಗಳು ಮುಳುವಾಗಿದ್ದನ್ನು ಅರಿತಿರುವ ಬಿಜೆಪಿ ಮತ್ತು ಸಂಘ ಪರಿವಾರ ಅದನ್ನೀಗ ಕಾಂಗ್ರೆಸ್​ಗೇ ತಿರುಗು ಬಾಣವಾಗಿಸಿ ರಾಜಕೀಯವಾಗಿ ಆದ ಹಿನ್ನೆಡೆಯಿಂದ ಮೇಲೆ ಬರಲು ಮುಂದಾಗಿವೆ. ಅದಕ್ಕಾಗಿ ಯೋಜನೆ ಹಾಕಿಕೊಂಡಿವೆ. ಹಾಗಾದರೆ ಸಂಘ ಪರಿವಾರದ ಆ ಯೋಜನೆ ಏನು? ಅದು ಕಾಂಗ್ರೆಸ್​ಗೆ ತಿರುಗುಬಾಣವಾಗುವುದು ಹೇಗೆ? ಇಲ್ಲಿದೆ ವಿವರ.

ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ: ಕಾಂಗ್ರೆಸ್​ಗೇ ತಿರುಗುಬಾಣವಾಗಿಸಲು ತಂತ್ರ
ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ
ಕಿರಣ್​ ಹನಿಯಡ್ಕ
| Edited By: |

Updated on: Jun 20, 2024 | 9:05 AM

Share

ಬೆಂಗಳೂರು, ಜೂನ್ 20: ಸಂವಿಧಾನದ (Constitution) ಕುರಿತಾಗಿ ನೀಡಿರುವ ಹೇಳಿಕೆಗಳಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ (BJP) ಹಿನ್ನೆಡೆ ಆಗಿರುವುದರಿಂದ ಈಗ ಸಂಘ (RSS) ಪರಿವಾರ ಎಚ್ಚೆತ್ತುಕೊಂಡಿದೆ.‌ ಜೂನ್ 25 ರಂದು ತುರ್ತು ಪರಿಸ್ಥಿತಿಯ ವರ್ಷಾಚರಣೆ ಸಂದರ್ಭ ರಾಜ್ಯದಲ್ಲಿ ವಿವಿಧ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಘ ಪರಿವಾರದ ಕಡೆಯಿಂದ ಸಿದ್ಧತೆ ನಡೆದಿದೆ. ಸಂವಿಧಾನದ ಕುರಿತ ಹೇಳಿಕೆಗಳ ಬಗ್ಗೆ ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಬಿಂಬಿಸಿದ ರೀತಿ ಬಿಜೆಪಿಗೆ ಇನ್ನಿಲ್ಲದ ಹೊಡೆತ ಕೊಟ್ಟಿತ್ತು.‌ ಎಸ್​ಸಿ, ಎಸ್​​ಟಿ ಕ್ಷೇತ್ರಗಳು ಬಿಜೆಪಿಯ ಅರಿವಿಗೇ ಇಲ್ಲದಂತೆ ಕೈ ಬಿಟ್ಟು ಹೋಗಿದ್ದವು. ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಕಾಂಗ್ರೆಸ್ ಸಂವಿಧಾನದ ಬಗ್ಗೆ ವಿಷಯ ಎತ್ತಲೂ ಅವಕಾಶವಿಲ್ಲದಂತಹ ರೀತಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಲು ಇದೀಗ ಬಿಜೆಪಿ ಹಾಗೂ ಸಂಘ ಪರಿವಾರ ಹೊರಟಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಆಚರಣೆಯ ದಿನವಾದ ಜೂನ್ 25 ರಂದು ರಾಜ್ಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಘ ಪರಿವಾರ ಮುಂದಾಗಿದೆ.

ಜೂನ್ 25 ರಂದು ರಾಜ್ಯದಲ್ಲಿ ವಿಚಾರ ಸಂಕಿರಣಗಳು, ಸಂವಾದಗಳು, ಭಾಷಣಗಳು, ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದ್ದು, ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನಕ್ಕೆ ಕಾಂಗ್ರೆಸ್ ಯಾವ ರೀತಿ ಅಪಚಾರ ಎಸಗಿತ್ತು ಎಂಬುದನ್ನು ಬಿಂಬಿಸಲು ತುರ್ತು ಪರಿಸ್ಥಿತಿಯ ದಿನದ ಮೂಲಕ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ಕುರಿತಂತೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬುಧವಾರ ಪ್ರಮುಖರ ಸಭೆ ಕೂಡಾ ನಡೆದಿದೆ. ಚಿಂತಕ ಚಕ್ರವರ್ತಿ ಸೂಲಿಬೆಲೆ, ಪ್ರಸಾರ ಭಾರತಿ ಮಾಜಿ ಅಧ್ಯಕ್ಷ ಅರಕಲಗೂಡು ಸೂರ್ಯಪ್ರಕಾಶ್ ಸೇರಿದಂತೆ ಸಂಘ ಪರಿವಾರದ ಹಿನ್ನೆಲೆಯ ಮುಖಂಡರು ಮತ್ತು ಬಿಜೆಪಿ ಶಾಸಕರು ಕೂಡಾ ಈ ಸಭೆಯಲ್ಲಿ ಭಾಗವಹಿಸಿದ್ದರು‌. ಮುಂದಿನ ವರ್ಷ ತುರ್ತು ಪರಿಸ್ಥಿತಿಯ 50 ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ಡಿಕೆ ಶಿವಕುಮಾರ್ ಪಣ: ಚನ್ನಪಟ್ಟಣದಲ್ಲಿ ಸೋಲಿನಲ್ಲೂ ಗೆಲುವು ಹುಡುಕಿದ ಡಿಸಿಎಂ‌

ಸಂವಿಧಾನದ ವಿಚಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಆಗಿರುವಂತಹ ಹಿನ್ನಡೆಯನ್ನು ಭರ್ತಿ ಮಾಡಿಕೊಳ್ಳಲು ತುರ್ತು ಪರಿಸ್ಥಿತಿಯ ದಿನದ ಕಾರ್ಯಕ್ರಮಗಳ ಮೂಲಕ ಸಿದ್ಧತೆ ಮಾಡಿಕೊಂಡಿರುವ ಬಿಜೆಪಿ, ಸಂವಿಧಾನದ ವಿಚಾರದಲ್ಲಿ ಆಗಿರುವ ನಷ್ಟವನ್ನು ಅದರಿಂದಲೇ ಗಳಿಸಿಕೊಳ್ಳಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ