AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ವಿಧಾನಸಭೆಯಲ್ಲಿ ನಮಾಜ್​ಗೆ ಪ್ರತ್ಯೇಕ ಕೊಠಡಿ ವಿವಾದ; ಜೈ ಶ್ರೀರಾಮ್ ಘೋಷಣೆ ಕೂಗಿ ಬಿಜೆಪಿ ಪ್ರತಿಭಟನೆ

ಇಂದು ಅಧಿವೇಶನ ಆರಂಭವಾಗುವುದಕ್ಕೂ ಮೊದಲೇ ವಿಧಾನಸಭೆ ಕೊಠಡಿಯ ಮೆಟ್ಟಿಲುಗಳ ಮೇಲೆ ಕುಳಿತ ಬಿಜೆಪಿ ಶಾಸಕರು ಹನುಮಾನ್ ಚಾಲೀಸಾ ಪಠಿಸಿ, ಹರೇ ರಾಮ ಎಂದು ಘೋಷಣೆ ಕೂಗಿದರು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀರಾಮ್ ಎಂದು ಕೂಗುತ್ತಾ ಸದನದ ಬಾವಿಗೆ ಇಳಿದರು.

ಜಾರ್ಖಂಡ್ ವಿಧಾನಸಭೆಯಲ್ಲಿ ನಮಾಜ್​ಗೆ ಪ್ರತ್ಯೇಕ ಕೊಠಡಿ ವಿವಾದ; ಜೈ ಶ್ರೀರಾಮ್ ಘೋಷಣೆ ಕೂಗಿ ಬಿಜೆಪಿ ಪ್ರತಿಭಟನೆ
ಜಾರ್ಖಂಡ್​ನ ನೂತನ ವಿಧಾನಸಭಾ ಕಟ್ಟಡ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 06, 2021 | 4:26 PM

ರಾಂಚಿ: ಜಾರ್ಖಂಡ್‌ ವಿಧಾನಸಭಾ ನೂತನ ಕಟ್ಟಡದಲ್ಲಿ ನಮಾಜ್‌ ಮಾಡಲು ಪ್ರತ್ಯೇಕ ರೂಂ ಮೀಸಲಿಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇಂದು ಜಾರ್ಖಂಡ್ ವಿಧಾನಸಭೆ ಅಧಿವೇಶನದಲ್ಲಿ ಕೂಡ ಇದೇ ವಿಚಾರಕ್ಕೆ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು. ಇಂದು ಅಧಿವೇಶನ ಆರಂಭವಾಗುವುದಕ್ಕೂ ಮೊದಲೇ ವಿಧಾನಸಭೆ ಕೊಠಡಿಯ ಪ್ರವೇಶ ದ್ವಾರದ ಬಳಿಯ ಮೆಟ್ಟಿಲುಗಳ ಮೇಲೆ ಕುಳಿತ ಬಿಜೆಪಿ ಶಾಸಕರು ಹನುಮಾನ್ ಚಾಲೀಸಾ ಪಠಿಸಿ, ಹರೇ ರಾಮ ಎಂದು ಘೋಷಣೆ ಕೂಗಿದರು.

ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ಎದ್ದು ನಿಂತು ಜೈ ಶ್ರೀರಾಮ್ ಎಂದು ಕೂಗುತ್ತಾ ಸದನದ ಬಾವಿಗೆ ಇಳಿದರು. ಸದನದೊಳಗೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿ, ಗಲಭೆ ಎಬ್ಬಿಸಿದ್ದರಿಂದ ವಿಧಾನಸಭಾ ಕಲಾಪಕ್ಕೆ ತೊಂದರೆಯಾಯಿತು. ಜಾರ್ಖಂಡ್ ಸರ್ಕಾರ ನಮಾಜ್‌ಗಾಗಿ ಪ್ರತ್ಯೇಕ ಕೊಠಡಿ ಮೀಸಲಿಡುವ ಆದೇಶವನ್ನು ವಾಪಾಸ್ ಪಡೆಯಲೇಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಸದಸ್ಯರನ್ನು ಸಾಂತ್ವನಗೊಳಿಸಿ, ಕಲಾಪ ಮುಂದುವರೆಸಲು ಪ್ರಯತ್ನಿಸಿದ ವಿಧಾನಸಭಾ ಸ್ಪೀಕರ್ ರವೀಂದ್ರನಾಥ್ ಮಾಹ್ಟೋ, ಬಿಜೆಪಿ ಶಾಸಕರೆಲ್ಲರೂ ದಯವಿಟ್ಟು ನಿಮ್ಮ ಸೀಟಿನಲ್ಲಿ ಕುಳಿತುಕೊಳ್ಳಿ. ಈ ಕಲಾಪ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪ್ರತಿಭಟನೆ ನಿಲ್ಲಿಸಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ಕಲಾಪವನ್ನು ಮುಂದೂಡಲಾಯಿತು.

ಜಾರ್ಖಂಡ್ ವಿಧಾನಸಭಾ ಸ್ಪೀಕರ್‌ ರವೀಂದ್ರನಾಥ್ ಮಾಹ್ಟೋ, ವಿಧಾನಸಭಾ ಕಟ್ಟಡದ 348ನೇ ನಂಬರ್ ಕೊಠಡಿಯನ್ನು ನಮಾಜ್‌ ಮಾಡಲು ಮೀಸಲಿಡುವಂತೆ ಆದೇಶ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ವಿಧಾನಸಭೆಯ ಆವರಣದಲ್ಲಿ ಹನುಮಾನ್ ಮಂದಿರವನ್ನು ನಿರ್ಮಿಸಿ, ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು.

ನೂತನ ವಿಧಾನ ಸಭೆ ಕಟ್ಟಡದಲ್ಲಿ ನಮಾಜ್‌ ಮಾಡಲು ಪ್ರತ್ಯೇಕ ಕೊಠಡಿ ಮೀಸಲಿಟ್ಟ ಜಾರ್ಖಂಡ್‌ನ ಹೇಮಂತ್‌ ಸೊರೇನ್‌ ನೇತೃತ್ವದ ಸರ್ಕಾರದ ನಿರ್ಧಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ವಿಧಾನಸಭೆಯ ಸ್ಪೀಕರ್‌ ರವೀಂದ್ರನಾಥ್ ಮೆಹ್ಟೋ ಈ ಆದೇಶ ಹೊರಡಿಸಿದ್ದರು. ಬಿಜೆಪಿ ನಾಯಕರು ಇದಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ವಿಧಾನಸಭೆ ಕಟ್ಟಡದಲ್ಲಿ ಆಂಜನೇಯನ ದೇವಸ್ಥಾನ ನಿರ್ಮಿಸಿ ಎಂದು ಒತ್ತಾಯ ಮಾಡಿದ್ದಾರೆ.

ಸ್ಪೀಕರ್ ಆದೇಶಕ್ಕೆ ಜಾರ್ಖಂಡ್‌ ವಿಧಾನಸಭೆಯ ಉಪ ಕಾರ್ಯದರ್ಶಿಯ ಸಹಿಯೂ ಬಿದ್ದಿದ್ದು, ಈ ಆದೇಶವನ್ನು ಹಿಂಪಡೆಯದಿದ್ದರೆ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ. ಆಡಳಿತ ಪಕ್ಷದ ಶಾಸಕರು ತಾಲಿಬಾನ್‌ ಬೆಂಬಲಿಗರಾಗಿದ್ದು, ಹೀಗಾಗಿಯೇ ಇಂತಹ ಆದೇಶ ಹೊರಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಯಾವ ವ್ಯಕ್ತಿಯೂ ಈ ರೀತಿಯ ಆದೇಶ ನೀಡುತ್ತಿರಲಿಲ್ಲ. ಮುಖ್ಯಮಂತ್ರಿ ಹೇಮಂತ್ ಸೊರೇನ್‌ ನೇತೃತ್ವದ ಸರ್ಕಾರ ಮತ ಬ್ಯಾಂಕ್‌ ರಾಜಕಾರಣಕ್ಕೆ ಸಂವಿಧಾನದ ಘನತೆಯನ್ನು ಹಾಳು ಮಾಡಿದೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.

ಆದರೆ, ತಮ್ಮ ಆದೇಶವನ್ನು ಸಮರ್ಥಿಸಿಕೊಂಡಿರುವ ಸ್ಪೀಕರ್ ರವೀಂದ್ರನಾಥ್ ಮಾಹ್ಟೋ, ಈ ವಿಚಾರದಲ್ಲಿ ಬಿಜೆಪಿ ಅನಗತ್ಯವಾಗಿ ವಿವಾದ ಉಂಟು ಮಾಡುತ್ತಿದೆ. ವಿಧಾನಸಭೆ ಈಗಾಗಲೇ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧವಾಗಿರಲಿದೆ ಎಂದಿದ್ದಾರೆ.

ಇದನ್ನೂ ಓದಿ: Javed Akhtar ಮುಂಬೈಯಲ್ಲಿರುವ ಜಾವೇದ್ ಅಖ್ತರ್  ಮನೆಗೆ ಬಿಗಿ ಭದ್ರತೆ; ಹೇಳಿಕೆಗೆ ಕ್ಷಮೆಯಾಚಿಸಲು ಬಿಜೆಪಿ ಒತ್ತಾಯ

Viral News: ಬ್ರೈನ್ ಟ್ಯೂಮರ್ ಸರ್ಜರಿ ವೇಳೆ ಹನುಮಾನ್ ಚಾಲೀಸಾ ಪಠಿಸಿದ ಮಹಿಳೆ; ಆಮೇಲೆ ನಡೆದಿದ್ದು ಅಚ್ಚರಿ!

(Ruckus in Jharkhand assembly over Namaz room BJP Protests in chanting Jai Shri Ram in Session)

Published On - 4:20 pm, Mon, 6 September 21

ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ