AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ? ಹೀಗಂದ್ರು ಅಣ್ಣಾಮಲೈ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ? ಹೀಗಂದ್ರು ಅಣ್ಣಾಮಲೈ
ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Jan 28, 2023 | 12:50 PM

Share

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಹೇಳಿದ್ದಾರೆ. ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಮೋದಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹ ಇತ್ತೀಚೆಗೆ ಹರಿದಾಡಿತ್ತು. ಇದರ ಅರ್ಥ ಮೋದಿಯವರು ಪ್ರಾದೇಶಿಕ ಅಡೆತಡೆಗಳನ್ನು ಮೀರಿದ ನಾಯಕ ಎಂದು ಅಣ್ಣಾಮಲೈ ಬಣ್ಣಿಸಿದ್ದಾರೆ.

ಮೋದಿ ಜೀ ಇಲ್ಲಿನವರೇ. ಕಳೆದ ಒಂದು ತಿಂಗಳಿನಲ್ಲಿ ನೀವು ತಮಿಳುನಾಡಿನ ಸುದ್ದಿಗಳನ್ನು ಗಮನಿಸಿದರೆ, ಮೋದಿ ಅವರು ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯನ್ನು ಯಾರೋ ಹರಿಯಬಿಟ್ಟಿರುವುದು ಗಮನಕ್ಕೆ ಬರಲಿದೆ. ಎಲ್ಲೇ ಹೋದರೂ, ಮೋದಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆಯೇ ಎಂಬುದಾಗಿ ಜನ ಪ್ರಶ್ನಿಸುತ್ತಿದ್ದಾರೆ ಎಂದು ‘ಎಎನ್​ಐ’ ಸುದ್ದಿ ಸಂಸ್ಥೆಗೆ ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: Karnataka News Live Updates: ಯುವಕರು ಎಲ್ಲ ಕ್ಷೇತ್ರಗಳಲ್ಲಿ ಧೈರ್ಯದಿಂದ ಮುನ್ನುಗ್ಗಬೇಕು: ಅಮಿತ ಶಾ

2014ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ವಾರಾಣಸಿ ಮತ್ತು ಗುಜರಾತ್​​ನ ವಡೋದರದಿಂದ ಮೋದಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಅವರು ವಾರಾಣಸಿಯನ್ನು ಉಳಿಸಿಕೊಂಡಿದ್ದರು. 2019ರಲ್ಲಿಯೂ ವಾರಾಣಸಿಯಿಂದ ಮರು ಆಯ್ಕೆಯಾಗಿದ್ದರು.

ರಾಮನಾಥಪುರದಿಂದ ಮೋದಿ ಚುನಾವಣೆ ಸ್ಪರ್ಧಿಸಲಿದ್ದಾರೆ ಎಂಬುದು ಊಹಾಪೋಹವಷ್ಟೆ. ಜನ ಈ ವದಂತಿಯನ್ನು ಹರಿಯಬಿಟ್ಟಿದ್ದಾರೆ. ಅವರು ಮಾತನಾಡುತ್ತಿದ್ದಾರೆ. ಮೋದಿ ಅವರು ಇಲ್ಲಿಂದ ಸ್ಪರ್ಧಿಸಬೇಕೆಂದು ಜನರು ಬಯಸುತ್ತಿದ್ದಾರೆ. ಮೋದಿ ಅವರನ್ನು ಹೊರಗಿನವರಲ್ಲ, ಇಲ್ಲಿನವರೇ ಎಂಬಂತೆ ಜನ ಪರಿಗಣಿಸಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ