AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸುವುದಕ್ಕೆ ಸುರೇಶ್ ಕುಮಾರ್ ಆಕ್ಷೇಪ; ಡಿಸಿಎಂ ತಿರುಗೇಟು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಸ್​ ಇರಲಿಲ್ವಾ? ಅವರು ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಮುದುವರಿದು ನಾನು ಯಾರಿಗೂ ಮುಜುಗರ ಉಂಟು ಮಾಡುತ್ತಿಲ್ಲ. ಮೈಸೂರು ಬಾರ್ ಕೌನ್ಸಿಲ್​​ನಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ವಿವಾದ ಆಗುತ್ತೆ ಎಂಬ ಕಾರಣಕ್ಕೆ ಅಲ್ಲಿಗೆ ಹೋಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸುವುದಕ್ಕೆ ಸುರೇಶ್ ಕುಮಾರ್ ಆಕ್ಷೇಪ; ಡಿಸಿಎಂ ತಿರುಗೇಟು
ಎಸ್​ ಸುರೇಶ್ ಕುಮಾರ್ & ಡಿಕೆ ಶಿವಕುಮಾರ್
TV9 Web
| Updated By: Ganapathi Sharma|

Updated on: Aug 07, 2023 | 6:42 PM

Share

ಬೆಂಗಳೂರು, ಆಗಸ್ಟ್ 07: ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾಗವಹಿಸುವ ಬಗ್ಗೆ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖವಾಗಿರುವುದಕ್ಕೆ ಮಾಜಿ ಕಾನೂನು ಸಚಿವ, ಬಿಜೆಪಿ ಶಾಸಕ ಎಸ್​ ಸುರೇಶ್ ಕುಮಾರ್ (S Suresh Kumar) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿಗಳಿರುವ ಕಾರ್ಯಕ್ರಮದಲ್ಲಿ ಆರೋಪಿ ಸ್ಥಾನದಲ್ಲಿರುವವರು ಭಾಗವಹಿಸಬಹುದೇ? ಆರೋಪಿ ಸ್ಥಾನದಲ್ಲಿರುವವರು ಜಡ್ಜ್‌ಗಳ ಜತೆ ವೇದಿಕೆ ಹಂಚಿಕೊಳ್ಳಬಹುದೇ ಎಂದು ಸುರೇಶ್ ಕುಮಾರ್‌ ಅವರು ರಿಜಿಸ್ಟ್ರಾರ್ ಜನರಲ್‌ರಿಗೆ ಪತ್ರ ಬರೆದಿದ್ದಾರೆ. ಜತೆಗೆ, ಸಾಮಾಜಿಕ ಮಾಧ್ಯಮ ಫೇಸ್​ಬುಕ್​ನಲ್ಲಿ ಕೂಡ ಪ್ರಶ್ನಿಸಿದ್ದಾರೆ.

ನಾನು ಕಾನೂನು ಸಚಿವನಾಗಿದ್ದಾಗ ಬಾರ್​​ ಕೌನ್ಸಿಲ್ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳುವವರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತಿತ್ತು. ಅವರ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಆದರೆ ಈಗ ಶಿಷ್ಟಾಚಾರ ಅನ್ವಯವಾಗುವುದಿಲ್ಲವೇ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‌ರಿಗೆ ಬರೆದ ಪತ್ರದಲ್ಲಿ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಆಗಸ್ಟ್ 12ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್, ಹೈಕೋರ್ಟ್ ಜಡ್ಜ್‌ಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಅಕ್ರಮಗಳ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

ಡಿಕೆ ಶಿವಕುಮಾರ್ ತಿರುಗೇಟು

ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದಕ್ಕೆ ಆಕ್ಷೇಪ ಬಂದ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಸ್​ ಇರಲಿಲ್ವಾ? ಅವರು ಬಾರ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಮುದುವರಿದು ನಾನು ಯಾರಿಗೂ ಮುಜುಗರ ಉಂಟು ಮಾಡುತ್ತಿಲ್ಲ. ಮೈಸೂರು ಬಾರ್ ಕೌನ್ಸಿಲ್​​ನಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ವಿವಾದ ಆಗುತ್ತೆ ಎಂಬ ಕಾರಣಕ್ಕೆ ಅಲ್ಲಿಗೆ ಹೋಗುವುದಿಲ್ಲ, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಆಹ್ವಾನ ನನಗೆ ಬರುತ್ತವೆ. ಸಾಕಷ್ಟು ಜಡ್ಜ್​ಗಳು‌ ಮದುವೆಗೂ ಕರೆಯುತ್ತಾರೆ. ಯಡಿಯೂರಪ್ಪ ಬಗ್ಗೆ ಸುರೇಶ್​​ ಕುಮಾರ್​ ಏಕೆ ಮಾತನಾಡಿರಲಿಲ್ಲ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ