Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡ ಮರು ಸ್ಪರ್ಧೆ ಒತ್ತಾಯದ ಹಿಂದೆ ಇದೆ ಬಿಜೆಪಿಯ ಮತ್ತೊಂದು ಲೆಕ್ಕಾಚಾರ!

ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಶಾಸಕ ಅಶ್ವಥ್ ನಾರಾಯಣ ಜತೆಗೂಡಿ ಸುಮಾರು ಮೂರು ತಾಸು ಮಾತುಕತೆ ನಡೆಸಿದ್ದರು. ಆ ನಂತರ ಡಿವಿ ಸದಾನಂದ ಗೌಡರ ನಿವಾಸಕ್ಕೆ ತೆರಳಿ ಮರು ಸ್ಪರ್ಧೆಯ ಬಗ್ಗೆ ಒತ್ತಾಯ ಮಾಡಿದ್ದರು.

ಸದಾನಂದ ಗೌಡ ಮರು ಸ್ಪರ್ಧೆ ಒತ್ತಾಯದ ಹಿಂದೆ ಇದೆ ಬಿಜೆಪಿಯ ಮತ್ತೊಂದು ಲೆಕ್ಕಾಚಾರ!
ಡಿವಿ ಸದಾನಂದಗೌಡ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Dec 29, 2023 | 9:34 AM

ಬೆಂಗಳೂರು, ಡಿಸೆಂಬರ್ 29: ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಬಿಜೆಪಿ ಸಂಸದ ಸದಾನಂದ ಗೌಡ (Sadananda Gowda) ಅವರು ಇದೀಗ, ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸುವಂತೆ ಹಿರಿಯ ನಾಯಕರಿಂದ ಒತ್ತಡ ಹೆಚ್ಚಾಗುತ್ತಿದೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಸದಾನಂದ ಗೌಡರ ಈ ಹೇಳಿಕೆಯ ಹಿಂದೆ ಬಿಜೆಪಿ (BJP) ನಾಯಕರ ಲೆಕ್ಕಾಚಾರವಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸದಾನಂದ ಗೌಡರು, ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ನಮ್ಮ ಹಿರಿಯ ನಾಯಕರು ಮನೆಗೆ ಬಂದು ಸ್ಪರ್ಧೆ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಹೇಳಿದ್ದರು.

ಅವರ ಹೇಳಿಕೆಯ ಹಿಂದೆ ಬಿಜೆಪಿ ನಾಯಕರ ಲೆಕ್ಕಾಚಾರವಿದೆ. ನೂತನವಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ ಅವರ ತೀರ್ಮಾನಗಳೆಲ್ಲವನ್ನೂ ಒಪ್ಪಿಕೊಳ್ಳಲು ಸಿದ್ಧ ಇಲ್ಲದ ಬಿಜೆಪಿ ನಾಯಕರೇ ಈ ತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಾರಣಕ್ಕಾಗಿ ವಿಜಯೇಂದ್ರ ಅವರ ಕೆಲವು ನಿರ್ಧಾರಗಳು ಒಪ್ಪಿಗೆಯಾಗದಿದ್ದರೂ ವಿರೋಧಿಸಲಾಗದ ಸ್ಥಿತಿ ಪಕ್ಷದ ಹಲವು ನಾಯಕರಲ್ಲಿದೆ. ಇದಕ್ಕಾಗಿ ಕೆಲವು ನಾಯಕರು ಸದಾನಂದ ಗೌಡರನ್ನು ಪರೋಕ್ಷವಾಗಿ ಮುಂದೆ ಬಿಟ್ಟಿದ್ದಾರೆ ಎನ್ನಲಾಗಿದೆ. ಬುಧವಾರ ಸದಾನಂದ ಗೌಡ ಅವರನ್ನು ಭೇಟಿಯಾಗುವುದಕ್ಕೂ ಮುನ್ನ ಮೂವರು ನಾಯಕರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ.

ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಶಾಸಕ ಅಶ್ವಥ್ ನಾರಾಯಣ ಜತೆಗೂಡಿ ಸುಮಾರು ಮೂರು ತಾಸು ಮಾತುಕತೆ ನಡೆಸಿದ್ದರು. ಆ ನಂತರ ಡಿವಿ ಸದಾನಂದ ಗೌಡರ ನಿವಾಸಕ್ಕೆ ತೆರಳಿ ಮರು ಸ್ಪರ್ಧೆಯ ಬಗ್ಗೆ ಒತ್ತಾಯ ಮಾಡಿದ್ದರು. ಮರು ಸ್ಪರ್ಧೆಯ ಮೂಲಕ ಸದಾನಂದ ಗೌಡರನ್ನು ಮುನ್ನೆಲೆಯಲ್ಲಿರಿಸುವ ಪ್ರಯತ್ನ ಈ ನಾಯಕರದ್ದು ಎಂದು ಹೇಳಲಾಗುತ್ತಿದೆ.

ಈ ಎಲ್ಲ ಬೆಳವಣಿಗೆಗಳ ಬಳಿಕ ಸದಾನಂದ ಗೌಡ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮನಸ್ಸು ಬದಲಿಸಿದ ಸದಾನಂದ ಗೌಡ, ಮತ್ತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸುಳಿವು

ನವೆಂಬರ್ 8ರಂದು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಸದಾನಂದ ಗೌಡರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವದಂತಿಗಳ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು. ಆದರೆ ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು, ಮರು ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!