AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕ್​ ಸೆ ಸಮರ್ಥನ್ ಅಭಿಯಾನ: ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ

ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸಂವಾದ ನಡೆಸುವ ಅವಕಾಶ ಸಿಗಲಿದೆ. ಇದಕ್ಕಾಗಿ ಫಲಾನುಭವಿಗಳ ಜೊತೆ ಹೆಚ್ಚಿನ ವಿಡಿಯೋ ಅಥವಾ ಸೆಲ್ಫಿ ತೆಗೆದು ಕಳುಹಿಸಬೇಕು.

ಸಂಪರ್ಕ್​ ಸೆ ಸಮರ್ಥನ್ ಅಭಿಯಾನ: ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ
ಸಂಪರ್ಕ್​ ಸೆ ಸಮರ್ಥನ್ ಅಭಿಯಾನದಡಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ
Rakesh Nayak Manchi
|

Updated on: Jun 18, 2023 | 8:36 PM

Share

ಬೆಂಗಳೂರು: ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಬಿಜೆಪಿ (BJP) ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಜೂನ್ 27 ರಂದು ಸಂವಾದ ನಡೆಸುವ ಅವಕಾಶ ಸಿಗಲಿದೆ. ಇದಕ್ಕಾಗಿ ಫಲಾನುಭವಿಗಳ ಜೊತೆ ಹೆಚ್ಚಿನ ವಿಡಿಯೋ ಅಥವಾ ಸೆಲ್ಫಿ ತೆಗೆದು ಕಳುಹಿಸಬೇಕು. ಈ ಬಗ್ಗೆ ಬಿಜೆಪಿ ಕರ್ನಾಟಕವು ಪೋಸ್ಟರ್ ಹಂಚಿಕೊಂಡಿದೆ.

ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ ಬೂತ್ ಎಂಬ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡ ಪೋಸ್ಟರ್​ನಲ್ಲಿ ಇರುವಂತೆ, ಪ್ರಧಾನಮಂತ್ರಿ ಅವರು ಪಕ್ಷದ 10 ಲಕ್ಷ ಬೂತ್​ಗಳಲ್ಲಿನ ಲಕ್ಷಾಂತರ ಕಾರ್ಯಕರ್ತರೊಂದಿಗೆ ಜೂನ್ 27 ರಂದು ಸಂವಾದ ನಡೆಸಲಿದ್ದಾರೆ. ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ವಿಡಿಯೋ ಅಥವಾ ಸೆಲ್ಫಿ ತರುವ ಕಾರ್ಯಕರ್ತರಿಗೆ ಮೋದಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಸಿಗಲಿದೆ.

ಈ ಮೂರು ಟಾಸ್ಕ್ ಪೂರ್ಣಗೊಳಿಸಬೇಕು

  • ಹರ್​ಘರ್ ವಿಕಾಸ್ ಫಲಾನುಭವಿಗಳ ಜೊತೆ ಸೆಲ್ಫಿ ತೆಗೆದು ಅಪ್​ಲೋಡ್ ಮಾಡಬೇಕು
  • ಸಂಪರ್ಕ್ ಸೆ ಸಮರ್ಥನ್: ಕ್ಷೇತ್ರದ ಗಣ್ಯ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿ ಫೋಟೋ ಅಪ್ಲೋಡ್ ಮಾಡಬೇಕು
  • ಬದಲಾಗುತ್ತಿರುವ ಭಾರತದ ಮಾತು: ಫಲಾನುಭವಿಗಳ ವಿಡಿಯೋ ಅಪ್ಲೋಡ್ ಮಾಡಬೇಕು

NAMO App ಮೂಲಕ ಈ ಮೂರು ಟಾಸ್ಕ್​ಗಳನ್ನು ಪೂರ್ಣಗೊಳಿಸಬೇಕು. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಹಾಭಿಯಾನದಲ್ಲಿ ಜೊತೆಗೂಡುವಂತೆ ಬಿಜೆಪಿ ಕರ್ನಾಟಕ ತಿಳಿಸಿದೆ.

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇದೇ ಮೇ 30 ಕ್ಕೆ 9 ವರ್ಷ ಪೂರ್ಣವಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಇದ್ದು, ಈಗಾಗಲೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಈ ಹಂತದಲ್ಲಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಕೂಡ ಒಂಬತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ ಜೂನ್​ 22ರಿಂದ 26ರವರೆಗೆ ಬಿಜೆಪಿ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಲು 7 ತಂಡಗಳನ್ನು ರಚಿಸಲಾಗಿದೆ.

ಇದರ ಜೊತೆಗೆ ಜೂನ್​​ 26ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ ನಡೆಯಲಿದ್ದು, . ಮನೆ ಮನೆಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಪ್ರತಿ ಮನೆಗೆ ಕೇಂದ್ರದ ಸಾಧನೆಗಳ ಕರಪತ್ರ ವಿತರಿಸಲಾಗುತ್ತದೆ. ಸುಮಾರು 50 ಲಕ್ಷ ಮನೆಗಳಿಗೆ ಕರಪತ್ರ ವಿತರಣೆ ಮಾಡುವ ಗುರಿಯನ್ನು ರಾಜ್ಯ ಬಿಜೆಪಿ ಘಟಕ ಹೊಂದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ