ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ

ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿ ಸಚಿವ ಪ್ರಿಯಾಂಕ್ ಖರ್ಗೆ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇನ್ನು ಈ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಗೆ ಸಮರ್ಥನೆ ನೀಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ
ಪ್ರಿಯಾಂಕ್ ಖರ್ಗೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 07, 2023 | 1:03 PM

ಬೆಂಗಳೂರು, (ಸೆಪ್ಟೆಂಬರ್ 07): ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ(Sanatana dharma remark) ಬಗ್ಗೆ ನೀಡಿರುವ ಹೇಳಿಕೆ ಇಡೀ ದೇಶಾದ್ಯಂತ ಕೊತಕೊತನೆ ಹೊತ್ತಿ ಉರಿಯುತ್ತಿದೆ. ಕೆಲವರು ಉದಯನಿಧಿ ಸ್ಟಾಲಿನ್ ವಿರುದ್ಧ ಕಿಡಿಕಾರುತ್ತಿದ್ದರೆ, ಇನ್ನೂ ಕೆಲವರು ಉದಯನಿಧಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅದರಂತೆ ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗದಂತೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್ ದಾಖಲಾಗಿದೆ. ಇದೀಗ ಈ ದೂರಿನ ಬಗ್ಗೆ ಇಂದು (ಸೆಪ್ಟೆಂಬರ್ 07) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನಾನು ಮಾಡಿದ ಟ್ವೀಟ್​​ನಲ್ಲಿ ಯಾವುದೇ ತಪ್ಪಿಲ್ಲ. ಸಂವಿಧಾನವೇ ನನ್ನ ಧರ್ಮ ಎಂದು ಹೇಳಿದ್ದೇನೆ. ಸಂವಿಧಾನದಿಂದ ಏನೂ ಇಲ್ಲ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಯವರು ಮೊಸರಿನಲ್ಲೂ ಕಲ್ಲು ಹುಡುಕುವುದು ಬೇಡ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ನಿಮ್ಮ ಆಚರಣೆ ವಿರುದ್ಧ ನಾನಿಲ್ಲ ಅಂದ್ರೆ ನನ್ನ ಆಚರಣೆ ವಿರುದ್ಧ ಯಾಕೆ ಇದ್ದೀರಾ? ಮಾನವ ಕುಲ ಮುಂದುವರೆಯಬೇಕು ಅಂದರೆ ಕುತೂಹಲ ಮುಖ್ಯ. ಸಂವಿಧಾನದ ಬಗ್ಗೆ ನಂಬಿಕೆ ಇದೆ. ನಾನು ಸ್ಟಾಲಿನ್ ನ ಅಥವಾ ಯಾರಿಗ್ಯಾಕೆ ಸಮರ್ಥನೆ ಮಾಡಬೇಕು. ಎಫ್ ಆರ್ ಐ ಎಲ್ಲಿಯಾದರೂ ಹಾಕಲಿ. ಸಂವಿಧಾನ ಗೌರವಿಸುತ್ತೇನೆ ಅಂದರೆ ಎಫ್ ಐ ಆರ್ ಹಾಕುತ್ತೇನೆ ಅಂದರೆ ಹಾಕಲಿ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: ಸನಾತನ ಧರ್ಮ ವಿವಾದ; ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು

ರಿಪಬ್ಲಿಕ್ ಆಪ್ ಭಾರತ್ ಹೆಸರು ನಾಮಕರಣ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಇದೊಂದು ವಾಟ್ಸ್ ಅಪ್ ವಿಶ್ವವಿದ್ಯಾಲಯದಲ್ಲಿ ಬೆಳೆದು ಬಂದವರು. ಇತಿಹಾಸ ತಿಳಿದುಕೊಂಡು ಬಂದಿಲ್ಲ. ಭಾರತ, ಇಂಡಿಯಾ ಹೇಗೆ ಬಂತು ಎಂದು ತಿಳಿದುಕೊಳ್ಳಲಿ. ರಸ್ತೆ ಹೆಸರು ಚೇಂಜ್ ಮಾಡುತ್ತಿದ್ದರು. ಈಗ ದೇಶದ ಹೆಸರು ಚೇಂಜ್ ಮಾಡುತ್ತಿದ್ದಾರೆ. ಮೊದಲು ದೇಶದ ಹಣೆಬರಹ ಬದಲಾವಣೆ ಮಾಡಿ. ಹಸಿವಿನಿಂದ ಎಷ್ಟು ಜ‌ನ ಸಾಯುತ್ತಿದ್ದಾರೆ. ಮೇಕ್ ಇನ್ ಇಂಡಿಯಾ, ಹಣಕಾಸಿನ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ