AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್ ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣೆ ಆಯೋಗ

ರಾಜ್ಯ ರಾಜಕಾರಣದಲ್ಲಿ ಡಿಫ್ರೆಂಟ್​ ಆಗಿ ಗಮನಸೆಳೆದಿರುವ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚುನಾವಣೆ ಆಯೋಗ ಅಧಿಕೃತ ಚಿಹ್ನೆಯನ್ನು ನೀಡಿದೆ.

ರಿಯಲ್ ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣೆ ಆಯೋಗ
ರಮೇಶ್ ಬಿ. ಜವಳಗೇರಾ
|

Updated on:Feb 24, 2023 | 4:54 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023)ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತಬೇಟೆಗಿಳಿದಿವೆ. ಇನ್ನೂ ದಿನಾಂಕ ಘೋಷಣೆಗೂ ಮುನ್ನವೇ ಪಕ್ಷಗಳು ಅಬ್ಬರ ಪ್ರಚಾರವನ್ನ ಶುರುಮಾಡಿಕೊಂಡಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ (Uttama Prajaakeeya Party) ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಈ ಕುರಿತು ಚುನಾವಣಾ ಆಯೋಗ (Election Commission)ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡುವ ಮೂಲಕ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈ ಪಕ್ಷದಿಂದ ಈಗಾಗಲೇ ಪಂಚಾಯತಿ ಚುನಾವಣೆಯನ್ನು ಅವರು ಎದುರಿಸಿದ್ದರು. ಈ ಪಕ್ಷದಿಂದ ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ, ಅಧಿಕೃತವಾಗಿ ಈ ಪಕ್ಷಕ್ಕೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ.

2018 ರಿಂದ ತಮ್ಮದೇ ಆದ ಸಿದ್ಧಾಂತ ಮೂಲಕ ಉಪೇಂದ್ರ ತಮ್ಮ ಪಕ್ಷಕ್ಕೆ ಅಭ್ಯರ್ಥಿಗಳನ್ನು ಸೆಳೆಯುತ್ತಿದ್ದಾರೆ. ಅಲ್ಲದೇ ಡಿಫ್ರೆಂಟ್​ನೊಂದಿಗೆ ಅಭ್ಯರ್ಥಿಯಗಳ ಆಯ್ಕೆ ಮಾಡುವ ಮೂಲಕ ಗಮನಸೆಳೆದಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದರು. ರಾಜೀಯಕ ಪಕ್ಷಗಳು ಸಾಕು ತ್ತಮ ಪ್ರಜಾಕೀಯ ಪಕ್ಷ ಬೇಕೆ ಎನ್ನುವ ಟ್ರೆಂಡ್ ಶುರುವಾಗಿತ್ತು.

Published On - 4:51 pm, Fri, 24 February 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ