AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್ ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣೆ ಆಯೋಗ

ರಾಜ್ಯ ರಾಜಕಾರಣದಲ್ಲಿ ಡಿಫ್ರೆಂಟ್​ ಆಗಿ ಗಮನಸೆಳೆದಿರುವ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚುನಾವಣೆ ಆಯೋಗ ಅಧಿಕೃತ ಚಿಹ್ನೆಯನ್ನು ನೀಡಿದೆ.

ರಿಯಲ್ ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣೆ ಆಯೋಗ
ರಮೇಶ್ ಬಿ. ಜವಳಗೇರಾ
|

Updated on:Feb 24, 2023 | 4:54 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023)ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತಬೇಟೆಗಿಳಿದಿವೆ. ಇನ್ನೂ ದಿನಾಂಕ ಘೋಷಣೆಗೂ ಮುನ್ನವೇ ಪಕ್ಷಗಳು ಅಬ್ಬರ ಪ್ರಚಾರವನ್ನ ಶುರುಮಾಡಿಕೊಂಡಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ (Uttama Prajaakeeya Party) ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಈ ಕುರಿತು ಚುನಾವಣಾ ಆಯೋಗ (Election Commission)ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡುವ ಮೂಲಕ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈ ಪಕ್ಷದಿಂದ ಈಗಾಗಲೇ ಪಂಚಾಯತಿ ಚುನಾವಣೆಯನ್ನು ಅವರು ಎದುರಿಸಿದ್ದರು. ಈ ಪಕ್ಷದಿಂದ ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ, ಅಧಿಕೃತವಾಗಿ ಈ ಪಕ್ಷಕ್ಕೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ.

2018 ರಿಂದ ತಮ್ಮದೇ ಆದ ಸಿದ್ಧಾಂತ ಮೂಲಕ ಉಪೇಂದ್ರ ತಮ್ಮ ಪಕ್ಷಕ್ಕೆ ಅಭ್ಯರ್ಥಿಗಳನ್ನು ಸೆಳೆಯುತ್ತಿದ್ದಾರೆ. ಅಲ್ಲದೇ ಡಿಫ್ರೆಂಟ್​ನೊಂದಿಗೆ ಅಭ್ಯರ್ಥಿಯಗಳ ಆಯ್ಕೆ ಮಾಡುವ ಮೂಲಕ ಗಮನಸೆಳೆದಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದರು. ರಾಜೀಯಕ ಪಕ್ಷಗಳು ಸಾಕು ತ್ತಮ ಪ್ರಜಾಕೀಯ ಪಕ್ಷ ಬೇಕೆ ಎನ್ನುವ ಟ್ರೆಂಡ್ ಶುರುವಾಗಿತ್ತು.

Published On - 4:51 pm, Fri, 24 February 23

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್