AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಮಾಧಾನ ಸ್ಫೋಟ: ಬೆಳಗಾವಿಗೆ ಬಂದ ಡಿಕೆ ಶಿವಕುಮಾರ್​ಗೆ ಟ್ರೈಲರ್​ ತೋರಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಕೆ ಶಿವಕುಮಾರ್ ಮೂಗು ತೂರಿಸುತ್ತಿರುವುದರಿಂದ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದರೂ ಸಹ ಮುನಿಸಿಕೊಂಡಿರುವ ಸತಿಶ್ ಜಾರಕಿಹೊಳಿ ಮಾತ್ರ ಜಿಲ್ಲೆಯಿಂದ ಆಚೆ ಇದ್ದಾರೆ. ಈ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಅವರಿಗೆ ಜಾರಕಿಹೊಳಿ ತಮ್ಮ ಪ್ರಭಾವ ಹೇಗಿದೆ ಎನ್ನುವುದನ್ನು ಟ್ರೈಲರ್ ತೋರಿಸಿದ್ದಾರೆ.

ಅಸಮಾಧಾನ ಸ್ಫೋಟ: ಬೆಳಗಾವಿಗೆ ಬಂದ ಡಿಕೆ ಶಿವಕುಮಾರ್​ಗೆ ಟ್ರೈಲರ್​ ತೋರಿಸಿದ ಸತೀಶ್ ಜಾರಕಿಹೊಳಿ
TV9 Web
| Edited By: |

Updated on: Oct 18, 2023 | 2:55 PM

Share

ಬೆಳಗಾವಿ, (ಅಕ್ಟೋಬರ್ 18): ಬೆಳಗಾವಿ (Belagavi) ಜಿಲ್ಲಾ ರಾಜಕಾರಣ ಮತ್ತೆ ರಾಜ್ಯ ರಾಜಕಾರಣದಲ್ಲಿ ಕಂಪನ ಸೃಷ್ಟಿಸಿದೆ. ಈ ಹಿಂದೆ ರಮೇಶ್ ಜಾರಕಿಹೊಳಿ-ಲಕ್ಷ್ಮೀ ಹೆಬ್ಬಾಳ್ಕರ್​ ನಡುವಿನ ಗುದ್ದಾಟದಿಂದ ಮೈತ್ರಿ ಸರ್ಕಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದೀಗ ಮತ್ತೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್​ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ. ಹೌದು..ಬೆಳಗಾವಿ ರಾಜಕೀಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇದರ ನಡುವೆಯೂ ಇಂದು (ಅಕ್ಟೋಬರ್ 18) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಆದ್ರೆ, ಈ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಗೈರು  ಎದ್ದು ಕಾಣುತ್ತಿದೆ. ತವರು ಜಿಲ್ಲೆಗೆ ಡಿಕೆಶಿ ಬಂದರೂ ಜಾರಕಿಹೊಳಿ ಅಂತರ ಕಾಪಾಡಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಸಮಧಾನ ಹೊರಹಾಕಿದ್ದಾರೆ. ಅಲ್ಲದೇ ಡಿಸಿಎಂಗೆ ತಮ್ಮ ಪ್ರಭಾವದ ಟ್ರೈಲರ್ ತೋರಿಸಿ, ಅಭಿಬಿ ಪಿಕ್ಚರ್ ಹೈ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಹೌದು….ನಾನಾ ಕಾರ್ಯಕ್ರಮಗಳ ನಿಮಿತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು (ಅಕ್ಟೋಬರ್ 18) ಬೆಳಗಾವಿಗೆ ಬಂದಿದ್ದಾರೆ. ಅಲ್ಲದೇ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಿಹೊಳಿ, ಡಿಸಿಎಂ ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ​ಅಲ್ಲದೇ  ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಸಹ ಬಂದಿಲ್ಲ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಚಿವರ ಮುಸುಕಿನ ಗುದ್ದಾಟ: ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​ ನಡುವೆ ಜಟಾಪಟಿ

ಬೆಳಗಾವಿ ಜಿಲ್ಲೆಯಲ್ಲಿ ಹನ್ನೊಂದು ಕಾಂಗ್ರೆಸ್ ಶಾಸಕರು ಇದ್ದಾರೆ. ಈ ಹನ್ನೊಂದು ಶಾಸಕರ ಪೈಕಿ ಒಬ್ಬೇ ಒಬ್ಬ ಶಾಸಕ ಕೂಡ ಡಿಕೆ ಶಿವಕುಮಾರ್ ಅವರ ಸ್ವಾಗತಕ್ಕೆ ಬಂದಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರೂ ಸಹ ಯಾವೊಬ್ಬ ಶಾಸಕರು ಸ್ವಾಗತಕ್ಕೆ ಬಾರದಿರುವುದು ಅಚ್ಚರಿಗೆ ಕಾರಣವಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾದಂತಾಗಿದೆ.

ತಮ್ಮ ಬೆಂಬಲಗರನ್ನು ಸಹ ಡಿಕೆ ಶಿವಕುಮಾರ್ ಕಾರ್ಯಕ್ರಮಗಳಿಂದ ದೂರ ಇಡುವ ಮೂಲಕ ಸತೀಶ್ ಜಾರಕಿಹೊಳಿ , ಇಡೀ ಬೆಳಗಾವಿ ಜಿಲ್ಲೆ ತಮ್ಮ ಕಂಟ್ರೋಲ್ ನಲ್ಲಿದೆ ಎನ್ನುವುದನ್ನು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟಂತಿದೆ. ಇದು ಜಸ್ಟ್  ಟ್ರೈಲರ್ ಎನ್ನಲಾಗಿದ್ದು,  ಇದು ಹೀಗೆ ಮುಂದುವರೆದಿದರೆ ಫಿಕ್ಚರ್​ ತೋರಿಸಬೇಕಾಗುತ್ತೆ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಸತೀಶ್ ಜಾರಕಿಹೊಳಿ 20 ಶಾಸಕರ ಜೊತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಬೆಳಗಾವಿಯಿಂದ ಮೈಸೂರಿಗೆ ತೆರಳಲು ಹೊರಟಿದ್ದ ಸತೀಶ್ ಜಾರಕಿಹೊಳಿ ಆ್ಯಂಡ್​ ತಂಡವನ್ನು ಸಿಎಂ ಸಿದ್ದರಾಮಯ್ಯ, ಹಾಗೂ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್​ ತಡೆದಿದ್ದರು ಎನ್ನಲಾಗಿದೆ.

ಒಟ್ಟಿನಲ್ಲಿ ಮೈತ್ರಿ ಸರ್ಕಾರವಿದ್ದಾಗ ರಮೇಶ್ ಜಾರಕಿಹೊಳಿ (Ramesh Jarkiholi) ಕಾಂಗ್ರೆಸ್​ಗೆ ತಲೆನೋವು ಆಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಅಸಮಾಧಾನ ಕಾಂಗ್ರೆಸ್​ ಗೆ ದೊಡ್ಡ ಟೆನ್ಷನ್ ತಂದೊಡ್ಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!