AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಮಾಡಿ ಎಂದು ವೈಯಕ್ತಿಕವಾಗಿ ಕೇಳುತ್ತಿಲ್ಲ: ಹೈಕಮಾಂಡ್​​ ಮಾಡಿದ್ರೆ ಓಕೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಇತ್ತೀಚೆಗೆ ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಆಸಕ್ತಿ ವ್ಯಕ್ತಪಡಿಸಿದ್ದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಇದೀಗ ನಾನಾಗಲಿ, ಸಚಿವ ರಾಜಣ್ಣ, ಗೃಹ ಸಚಿವ ಪರಮೇಶ್ವರ್​ ಅವರಾಗಲಿ ಡಿಸಿಎಂ ಮಾಡಿ ಎಂದು ಕೇಳುತ್ತಿಲ್ಲ. ಹೈಕಮಾಂಡ್ ಮಾಡಬೇಕೆಂದು ಅಲ್ಲಿ ಒತ್ತಡ ಇದೆ. ನಾವು ವೈಯಕ್ತಿಕವಾಗಿ ಕೇಳುತ್ತಿಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಮಾಡಿ ಎಂದು ವೈಯಕ್ತಿಕವಾಗಿ ಕೇಳುತ್ತಿಲ್ಲ: ಹೈಕಮಾಂಡ್​​ ಮಾಡಿದ್ರೆ ಓಕೆ ಎಂದ ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 22, 2023 | 3:16 PM

Share

ಬೆಂಗಳೂರು, ಸೆಪ್ಟೆಂಬರ್​ 22: ನಾನಾಗಲಿ, ಸಚಿವ ರಾಜಣ್ಣ, ಗೃಹ ಸಚಿವ ಪರಮೇಶ್ವರ್​ ಅವರಾಗಲಿ ಡಿಸಿಎಂ (DCM) ಮಾಡಿ ಎಂದು ಕೇಳುತ್ತಿಲ್ಲ. ಹೈಕಮಾಂಡ್ ಮಾಡಬೇಕೆಂದು ಅಲ್ಲಿ ಒತ್ತಡ ಇದೆ. ನಾವು ವೈಯಕ್ತಿಕವಾಗಿ ಕೇಳುತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ. ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಮುದಾಯದವರನ್ನು ಡಿಸಿಎಂ ಮಾಡಿದ್ದರು. ಹಿಂದೆ ಜಿ ಪರಮೇಶ್ವರ್ ಅವರನ್ನ ಮಾಡಿದ್ದರು. ಚುನಾವಣೆ ಮೇಲೆ ಈ ವಿಚಾರ ಪ್ರಭಾವ ಬೀರುವುದಿಲ್ಲ. ಅದನ್ನ ಕೊಟ್ಟರೆ ಎಷ್ಟು ಲಾಭ ಆಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಮಾಡುವುದು, ಬಿಡುವುದು ಹೈಕಮಾಂಡ ತೀರ್ಮಾನ ಮಾಡುತ್ತೆ

ವಿಧಾನಸಭೆ ಚುನಾವಣೆ ಮುನ್ನ ನಾವು ಏನಾಗಿದ್ದೇವು, ಜನ ಪಕ್ಷ ನೋಡಿ ತೀರ್ಮಾನ ಮಾಡುತ್ತಾರೆ. ಸಿಎಂ, ಡಿಸಿಎಂ ಆದರೆ ಜನ ಓಟು ಕೊಡುತ್ತಾರೆ ಎಂದು ಹೇಳುವುದಕ್ಕೆ ಆಗಲ್ಲ. ಡಿಸಿಎಂ ಮಾಡುವುದು, ಬಿಡುವುದು ಹೈಕಮಾಂಡ ತೀರ್ಮಾನ ಮಾಡುತ್ತದೆ. ನಾನೇನು ಆಕಾಂಕ್ಷಿಯಲ್ಲ, ಪಕ್ಷ ಮೊದಲು ತೀರ್ಮಾನ ಮಾಡಬೇಕು. ನಮ್ಮನ್ನು ಕೇಳಿ ಮಾಡುವುದಿಲ್ಲ, ಯಾರು ಮಾಡಬೇಕೆಂದು ಅವರು ತೀರ್ಮಾನ ಮಾಡುತ್ತಾರೆ. ಕಾದು ನೋಡೋಣ, ನಾವು ಆಕಾಂಕ್ಷಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಡಿಸಿಎಂ ಸ್ಥಾನದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ; ಹೇಳಿದ್ದಿಷ್ಟು

ನಮ್ಮ ಬೆಂಬಲಿಗರು ಆಸೆ ಪಡುತ್ತಾರೆ ಅಂತ ಮಾಡುವುದಕ್ಕೆ ಆಗಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸಚಿವರಾಗುವವರು 30 ಮಂದಿ ಇದ್ದಾರೆ. ಆದರೆ ಅವರಿಗೆ ಸಿಕ್ಕಿಲ್ಲ. ನಾನು ಸಿದ್ದರಾಗಿರಬೇಕಿಲ್ಲ, ಹೈಕಮಾಂಡ್ ನಿಂದ ಒಂದು ಪತ್ರ ಬರುತ್ತೆ, ಸಿಎಂ ರಾಜ್ಯಪಾಲರಿಗೆ ಕಳುಹಿಸುತ್ತಾರೆ. ಅವರು ಓಕೆ ಮಾಡುತ್ತಾರೆ. ನಾವೇನು ಮತ್ತೆ ಪ್ರಮಾಣ ವಚನ ಸ್ವೀಕಾರ ಮಾಡಬೇಕಿಲ್ಲ. ಅದೆಲ್ಲ ಪ್ರಕ್ರಿಯೆ ಅಷ್ಟೇ, ರಾಜ್ಯಪಾಲರಿಂದ ಸರ್ಟಿಫಿಕೇಟ್ ಬರುತ್ತೆ ಅಷ್ಟೇ ಎಂದು ಹೇಳಿದ್ದಾರೆ.

ಕಾವೇರಿ ಸಮಸ್ಯೆಯನ್ನು ರಾಜಕೀಯವಾಗಿ ನೋಡಬಾರದು  

ಕಾವೇರಿ ಸಮಸ್ಯೆ ಎಲ್ಲ ಸರ್ಕಾರದ ವೇಳೆಯೂ ಬಂದಿದೆ. ಮಾಜಿ ಸಿಎಂ ಗಳಾದ ಹೆಚ್​ಡಿ ಕುಮಾರ ಸ್ವಾಮಿ, ಬಸವರಾಜ ಬೊಮ್ಮಾಯಿ ಎಲ್ಲರ ಕಾಲದಲ್ಲೂ ನೀರು ಬಿಟ್ಟಿದ್ದಾರೆ. ಎಲ್ಲರ ಕಾಲದಲ್ಲೂ ಈ ಸಮಸ್ಯೆಯನ್ನ ಅನುಭವಿಸಿದ್ದೇವೆ. ಅವರು ಹೇಗೆ ನೋಡುತ್ತಾರೆ ಹಾಗೆ ಕಾಣುತ್ತೆ. ಅವರು ರಾಜಕೀಯವಾಗಿ ನೋಡಿದರೆ ಹಾಗೆ ಇರುತ್ತೆ. ರಾಜ್ಯದ ದೃಷ್ಟಿಯಿಂದ ಎಲ್ಲರೂ ಒಂದಾಗಿ ನೋಡಬೇಕಾಗುತ್ತೆ. ಕಾವೇರಿ ವಿಚಾರವಾಗಿ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ದಿಢೀರ್ 3 ಡಿಸಿಎಂ ಹುದ್ದೆ ಸೃಷ್ಟಿಗೆ ಬೇಡಿಕೆ ಹೆಚ್ಚುತ್ತಿರುವುದೇಕೆ? ಇದರ ಹಿಂದಿನ ರಾಜಕೀಯ ಲೆಕ್ಕಾಚಾರವೇನು?

ಎಸ್​ಎಂ ಕೃಷ್ಣ ಅವರ ಕಾಲದಲ್ಲಿ ಈ ರೀತಿಯಾದಾಗ, ನೀರು ಬಿಡದಿದ್ದಾಗ ಮುಖ್ಯಮಂತ್ರಿಯವರನ್ನೆ ಹಾಜರಾಗುವಂತೆ ಕೋರ್ಟ್ ಹೇಳಿತ್ತು. ಮಹದಾಯಿ, ಕಾವೇರಿ ಈ ವಿಚಾರವಾಗಿ ಎಲ್ಲರೂ ಒಗ್ಗಟ್ಟಾಗಿ ಪರಿಹಾರ ಕಂಡುಕೊಳ್ಳಬೇಕು. ರೈತರು ಪ್ರತಿಭಟನೆ ಮಾಡುತ್ತಾರೆ, ಅವರಿಗೆ ಹಕ್ಕಿದೆ. ಆದರೆ ಪಕ್ಷಗಳು ಇದರಲ್ಲಿ ರಾಜಕೀಯ ಮಾಡಬಾರದು. ಒಬ್ಬರ ವಿರುದ್ಧ, ಒಬ್ಬರು ಹೋರಾಟ ಮಾಡುವ ಸಂಧರ್ಭ ಅಲ್ಲ ಇದು. ಎಲ್ಲರು ಒಂದೇ ಎಂದು ನೋಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಶಾಶ್ವತ ಹೋರಾಟ ಮಾಡಬೇಕು. ಮಳೆ ಕಡಿಮೆ ಇರುವುದರಿಂದ ಸಮಸ್ಯೆ ಉದ್ಭವ ಆಗಿದೆ. ನೀರನ್ನ ತರಲು ಆಗುವುದಿಲ್ಲ, ನೀರನ್ನ ಕಾಯ್ದುಕೊಳ್ಳಬೇಕು. ಮಳೆನೇ ಆಗದಿದ್ದಾಗ ನೀರು ಹೇಗೆ ಬಿಡುವುದು. ಒಂದು ಬೆಳೆಗೆ ಮಾತ್ರ ನೀರನ್ನ ಬಿಟ್ಟಿದ್ದೀವಿ. ಇನ್ನೊಂದು ಬೆಳೆಗೆ ನೀರು ಬಿಡಲು ಆಗುತ್ತಿಲ್ಲ. 8 ತಿಂಗಳು ಕುಡಿಯುವ ನೀರು ಇಟ್ಟುಕೊಳ್ಳಬೇಕು ಎಂದರು.

ಮಂಡ್ಯ ಬಂದ್ ವಿಚಾರವಾಗಿ ಮಾತನಾಡಿದ ಅವರು, ಎಲ್ಲರೂ ಪ್ರತಿಭಟನೆ ಮಾಡಿದ್ದಾರೆ. ರಾಜಕೀಯವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ. ಜೆಡಿಎಸ್‌ನವರು ಪ್ರತಿಭಟನೆ ಮಾಡಿದ್ದಾರೆ. ನಾವು ಸಹ ಪ್ರತಿಭಟನೆ ಮಾಡಿದ್ದೇವೆ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನ ರಾಜಕೀಯವಾಗಿ ನೋಡಬಾರದು ರಾಜ್ಯದ ಹಿತದೃಷ್ಟಿಯಿಂದ ನೋಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ