AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಇಂದು ದೆಹಲಿಯಲ್ಲಿ ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿ ಸೇರಿದಂತೆ 20 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ
ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ನಿತಿನ್ ಗಡ್ಕರಿ
ಹರೀಶ್ ಜಿ.ಆರ್​.
| Edited By: |

Updated on:Jul 26, 2023 | 5:42 PM

Share

ದೆಹಲಿ, ಜುಲೈ 26: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್​ ಉಗ್ರಗಾಮಿ ಸಂಘಟನೆ ಮುಖ್ಯಸ್ಥ: ಬಿಜೆಪಿ ಸಂಸದ ಎಸ್​ ಮುನಿಸ್ವಾಮಿ ತೀವ್ರ ವಾಗ್ದಾಳಿ

38 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.

ಇದನ್ನೂ ಓದಿ: ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ

ಏನೇ ಸಮಸ್ಯೆ ಇದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ

ಸಚಿವರ ವಿರುದ್ಧ ಕಾಂಗ್ರೆಸ್​ ಶಾಸಕರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾಳೆ ಸಿಎಲ್​ಪಿ ಸಭೆಯಲ್ಲಿ ಎಲ್ಲವೂ ಚರ್ಚೆ ಮಾಡಲಾಗುವುದು. ಏನೇ ಸಮಸ್ಯೆ ಇದ್ದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಬಹುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಗೆಹರಿಸುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:40 pm, Wed, 26 July 23

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ