ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನಲು ಸಾಧ್ಯವಿಲ್ಲ, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ

ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನಲು ಸಾಧ್ಯವಿಲ್ಲ, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ
ಚಿಂತಕ ರೋಹಿತ್ ಚಕ್ರತೀರ್ಥ

Updated on: Jun 15, 2023 | 9:17 PM

ಶಿವಮೊಗ್ಗ: ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ದಿಗ್ಗಜರ ಪಾಠ ಸೇರಿಸಿದ್ದೆವು. ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದ್ರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ (Rohit Chakratirtha) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಮತ್ತು ಕೇಶವ ಹೆಡ್ಗೇವಾರ್ ಅವರ ಪಾಠ ತೆಗೆಯಲು ಸರ್ಕಾರ ಮುಂದಾಗಿದೆ. ಯಾಕೆ ಅಂತ ಅದನ್ನ ಸರ್ಕಾರಕ್ಕೆ ನೀವು ಕೇಳಬೇಕು. ಇವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎನ್ನಲು ಯಾರಿಗೂ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ದಾಖಲೆ ಒದಗಿಸಲು ನಾನು ಸಿದ್ದನಿದ್ದೇನೆ. ಮಕ್ಕಳಲ್ಲಿ ರಾಷ್ಟ್ರೀಯತೆಯನ್ನ ಬಳಸಲು ನಮ್ಮ‌ ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಈ ಇಬ್ಬರು ದಿಗ್ಗಜರ ಪಾಠ ಸೇರಿಸಿದ್ದೆವು. ಈಗ ಅದನ್ನ ಸರ್ಕಾರ ತೆಗೆಯಲು ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದಿದ್ದಾರೆ.

ಸರ್ಕಾರ ಸರ್ವ ಸ್ವತಂತ್ರ

ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರ ಸರ್ವ ಸ್ವತಂತ್ರ ಎಂದರು.

ಇದನ್ನೂ ಓದಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?

ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ

ಪರಿಷ್ಕರಣೆ ಮಾಡುವಾಗ ಹಿಂದಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರನ್ನ ಆಹ್ವಾನಿಸಿದ್ದೆವು. ಆಗ ಅವರು ನಮ್ಮ ಆಹ್ವಾನಕ್ಕೆ ಪ್ರತಿಕ್ರಿಯಿಸಿರಲಿಲ್ಲ. ಈಗಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು ಒಂದು ವೇಳೆ ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ. ಪಠ್ಯ ಸೇರಿಸಲು ಸ್ಪಷ್ಟ ಕಾರಣ ಕೊಡಲು ನಾನು ಸಿದ್ದನಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Cabinet Meeting: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ತೀರ್ಮಾನ, ಪಠ್ಯ ಪರಿಷ್ಕರಣೆಗೆ ಅಸ್ತು ಎಂದ ಸಿದ್ದರಾಮಯ್ಯ ಸಂಪುಟ!

ಪಠ್ಯ ಪರಿಷ್ಕರಣೆಯನ್ನ ಜನ ಸಾಮಾನ್ಯರು ಒಪ್ಪಿಕೊಂಡರೆ ಒಳ್ಳೆಯದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ರೀತಿಯಲ್ಲಿ ಆಹ್ವಾನಿಸಿದರೆ ನಾನು ಮೌನಿಯಾಗಿರಲ್ಲ. ಪ್ರಜಾಪ್ರಭುತ್ವದ ರೀತಿಯಲ್ಲಿ ಚರ್ಚೆ ನಡೆದರೆ ಅಭ್ಯಂತರವಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Thu, 15 June 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us