AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿವೈ ವಿಜಯೇಂದ್ರ, ಸಿಎಂ ಜೊತೆ ಕುಶಲೋಪರಿ

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.

ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿವೈ ವಿಜಯೇಂದ್ರ, ಸಿಎಂ ಜೊತೆ ಕುಶಲೋಪರಿ
ಸಿದ್ದರಾಮಯ್ಯನವರನ್ನ ಭೇಟಿಯಾದ ವಿಜಯೇಂದ್ರ
Follow us
ರಮೇಶ್ ಬಿ. ಜವಳಗೇರಾ
|

Updated on:May 23, 2023 | 1:21 PM

ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa)ನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಮೇ 23) ವಿಧಾನಸಭೆಯಲ್ಲಿ ಶಿಕಾರಿಪುರದ ನೂತನ ಶಾಸಕ ಬಿ.ವೈ. ವಿಜಯೇಂದ್ರ ಅವರು ಹುಚ್ಚೂರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ವಿಜಯೇಂದ್ರ, ಎಲ್ಲಾ ಪಕ್ಷದ ನಾಯಕರನ್ನು ಭೇಟಿ ಮಾಡಿ ಕೈಕುಲುಕಿದರು. ಇನ್ನು ವಿಧಾನಸಭೆಯಲ್ಲಿ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಸಹ ವಿಜಯೇಂದ್ರ ಅವರಿಗೆ ಶುಭಾಶಯ ಕೋರಿದರು. ಶಾಸಕನಾಗಿ ಆಯ್ಕೆಯಾಗಿ ಬಂದಿದ್ದಕ್ಕೆ ಶುಭಾಶಯ ಹೇಳಿದ ಸಿದ್ದರಾಮಯ್ಯ, ನಿಮ್ಮ ತಂದೆ(ಬಿಎಸ್ ಯಡಿಯೂರಪ್ಪ) ಫೋನ್ ಮಾಡಿದ್ದರು ಎಂದರು. ಹೌದು, ನಾನೇ ನೇರವಾಗಿ ಭೇಟಿ ಮಾಡುತ್ತೇನೆ ಎಂದು ಸುಮ್ಮನಾದೆ ಎಂದ ವಿಜಯೇಂದ್ರ‌ ಹೇಳಿದರು.

ಇದನ್ನೂ ಓದಿ: Karnataka Breaking Kannada News Live: ವಿಶೇಷ ಅಧಿವೇಶನ, ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ, ಚುನಾವಣಾ ರಾಜಕೀಯದಿಂದ ಬಿಎಸ್​ವೈ ನಿವೃತ್ತಿ ಪಡೆದುಕೊಂಡು ಪುತ್ರ ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು.  ಅದರಂತೆ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಿಜಯೇಂದ್ರ  ಸುಮಾರು 11,008 ಮತಗಳ ಅಂತರದಿಂದ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:58 pm, Tue, 23 May 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್