AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ

ಒಳಒಪ್ಪಂದ ರಾಜಕೀಯ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ. ಇದರ ಮಧ್ಯೆ ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ.

ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಬಿಜೆಪಿ ನಾಯಕ
ಬಿಜೆಪಿ
ರಮೇಶ್ ಬಿ. ಜವಳಗೇರಾ
|

Updated on: Jun 21, 2023 | 12:22 PM

Share

ನವದೆಹಲಿ: ​​ ಕಾಂಗ್ರೆಸ್(Congress) ಜತೆ ಬಿಜೆಪಿ(BJP) ಅತಿರಥರೇ ಒಳಒಪ್ಪಂದ ಮಾಡಿಕೊಂಡಿರುವ ಬಾಂಬ್ ಸ್ಫೋಟವಾಗಿದೆ. ಹೌದು..ಶಾಮೀಲು.. ಅಡ್ಜಸ್ಟ್​ಮೆಂಟ್.. ಒಳಒಪ್ಪಂದ.. ಈ ಮಾತುಗಳು ಈಗ ರಾಜ್ಯ ಬಿಜೆಪಿಯಲ್ಲಿ ತಲ್ಲಣವೇ ಸೃಷ್ಠಿಸುತ್ತಿದೆ.  ಸ್ವಪಕ್ಷದ ನಾಯಕರ ವಿರುದ್ಧವೇ ಸಂಸದ ಪ್ರತಾಪ್ ಸಿಂಹ (Pratap Simha), ಮಾಜಿ ಶಾಸಕ ಸಿ.ಟಿ.ರವಿ (CT Ravi) ಅಡ್ಜಸ್ಟ್​ಮೆಂಟ್ ಬಾಣ ಬಿಟ್ಟಿದ್ದು, ಇದು ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಉರಿಯುವ ಬೆಂಕಿಗೆ ಮತ್ತೋರ್ವ ಬಿಜೆಪಿ ನಾಯಕ ತುಪ್ಪ ಸುರಿದಿದ್ದಾರೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್​ ಸ್ಫೋಟಕ ಹೇಳಿಕೆ ನಿಡಿದ್ದಾರೆ.

ಇದನ್ನೂ ಓದಿ: ಕೋಟಿ ಕೋಟಿ ಹಣ ಪಡೆದು ತಮ್ಮ ಅಭ್ಯರ್ಥಿಯನ್ನೇ ಸೋಲಿಸಿದ್ರಾ ಮುಖಂಡರು? ಆಡಿಯೋ ವೈರಲ್

ನವದೆಹಲಿಯಲ್ಲಿ ಇಂದು(ಜೂನ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಎಂಬುದು ಮುಗಿದಕಥೆ. ಹೊಂದಾಣಿಕೆ ಬಗ್ಗೆ ಈಗ ಮಾತನಾಡಿದ್ರೆ ನಾವು ಬೆಂಕಿ ಹಚ್ಚಿದಂತೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ನನಗೂ ವೈಯಕ್ತಿಕವಾಗಿ ಅನಿಸಿದೆ ಎಂದು ಹೇಳಿದರು.

ಮಂತ್ರಿ ಮಂಡಲ ವಿಸ್ತರಣೆ ಮಾಡದಿರುವುದು ಸೋಲಿಗೆ ಕಾರಣ. ಕಾಂಗ್ರೆಸ್​​ನ ಸುಳ್ಳು ಆರೋಪಗಳಿಗೆ ಠಕ್ಕರ್ ಕೊಡಲು ಆಗಲಿಲ್ಲ. ಆದರೆ ಈಗ ಚರ್ಚೆ ಮಾಡುವುದು ಅನಗತ್ಯ. JDS, ಬಿಜೆಪಿ ಹೋರಾಟದಿಂದ ಮೂರನೆಯವರಿಗೆ ಲಾಭವಾಗಿದೆ ಎಂದಿರುವ ಯೋಗೇಶ್ವರ್, ಬಿಜೆಪಿ, ಜೆಡಿಎಸ್​ ಮೈತ್ರಿ ಬಗ್ಗೆ ನಾನು ಮಾತನಾಡಲ್ಲ.ಮೈತ್ರಿ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ