AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RV Deshpande: 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ -ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಆಯ್ಕೆ

ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭ್ಯವಾಗಿದೆ.

RV Deshpande: 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ -ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಆಯ್ಕೆ
ಹಿರಿಯ ಶಾಸಕ ಆರ್.ವಿ. ದೇಶಪಾಂಡೆ
TV9 Web
| Edited By: ಸಾಧು ಶ್ರೀನಾಥ್​|

Updated on:Dec 28, 2022 | 12:25 PM

Share

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆಗೆ (Raghunath Vishwanath Rao Deshpande) ಅತ್ಯುತ್ತಮ ಶಾಸಕ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಕಳೆದ ವರ್ಷದಿಂದ ಆರಂಭಗೊಂಡಿದೆ. ಶಿಕಾರಿಪುರ ಕ್ಷೇತ್ರದ ಶಾಸಕ ಬಿ ಎಸ್ ​ಯಡಿಯೂರಪ್ಪ ಅವರು ಮೊದಲ ಪ್ರಶಸ್ತಿಗೆ ಭಾಜನರಾಗಿದ್ದರು.

ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಶಾಸಕ ಆರ್.ವಿ.ದೇಶಪಾಂಡೆಗೆ ಇಂದು ಪ್ರಶಸ್ತಿ ಪ್ರದಾನ ಮಾಡಿದರು. 75 ವರ್ಷ ವಯಸ್ಸಿನ ಹಿರಿಯ ನಾಯಕ ದೇಶಪಾಂಡೆ ಅವರು ಇದುವರೆಗೂ 9 ಬಾರಿ ಅಸೆಂಬ್ಲಿ ಚುನಾವಣೆ ಎದುರಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಹುಟ್ಟೂರಾದ ಹಳಿಯಾಳ ಅಸೆಂಬ್ಲಿ ಕ್ಷೇತ್ರವನ್ನು ಕಾಂಗ್ರೆಸ್​ ವತಿಯಿಂದ ಪ್ರತಿನಿಧಿಸಿದ್ದಾರೆ.

ಸಿದ್ದರಾಮಯ್ಯ ಬಹಳ ಫಾಸ್ಟ್! ದೇಶಪಾಂಡೆರನ್ನು ಓವರ್ ಟೇಕ್ ಮಾಡಿ ಸಿಎಂ ಆಗಿಬಿಟ್ರು!

ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನದ ಬಳಿಕ ಸದನದಲ್ಲಿ ದೇಶಪಾಂಡೆಗೆ ಅಭಿನಂದನಾ ಮಾತು ಸಲ್ಲಿಸಲಾಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿನ‌ ವೇಳೆ ದೇಶಪಾಂಡೆ ಬರ್ತ್ ಸರ್ಟಿಫಿಕೇಟ್ ಬಗ್ಗೆಯೇ ಅನುಮಾನ ಇದೆ, ರಾಹುಲ್ ಗಾಂಧಿ ಕೂಡಾ ದೇಶಪಾಂಡೆ ಅವರಿಗೆ ನಿಜಕ್ಕೂ 75 ವರ್ಷ ಆಗಿದ್ಯಾ? ಅಂತಾ ಕೇಳಿದ್ದರು ಎಂದು ಕೃಷ್ಣ ಬೈರೇಗೌಡ ಹೇಳಿದರು. ದೇಶಪಾಂಡೆ ವಯಸ್ಸಿನ ಬಗ್ಗೆ ತನಿಖೆ ಆಗಲಿ, ಬೇಕಾದರೆ ಸದನ ಸಮಿತಿ ರಚನೆ ಮಾಡಿ ಎಂದು ಸಿದ್ದರಾಮಯ್ಯ ಕಿಚಾಯಿಸಿದರು. ನಮ್ಮಪ್ಪ ಹೊಲ ಉಳುವಾಗ ದೇಶಪಾಂಡೆ ಅಪ್ಪ ಲಾಯರ್ ಆಗಿದ್ದರು ಎಂದು ಹೇಳುತ್ತಿದ್ದರು ಎಂದೂ ಸಿದ್ದರಾಮಯ್ಯ ಸೇರಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಿಎಂ ಬಸವರಾಜ ಬೊಮ್ಮಾಯಿ ನೀವು (ಸಿದ್ದರಾಮಯ್ಯ) ಬಹಳ ಫಾಸ್ಟ್! ದೇಶಪಾಂಡೆ ಅವರನ್ನು ಓವರ್ ಟೇಕ್ ಮಾಡಿ ಸಿಎಂ ಆಗಿಬಿಟ್ರಿ ಎಂದರು ಗಂಭೀರವಾಗಿ!

ಈಗಾಗಲೇ ಚುನಾವಣೆಯಿಂದ ನಿವೃತ್ತನಾಗುವ ಬಗ್ಗೆ ಹಲವು ಬಾರಿ ದೇಶಪಾಂಡೆ ಹೇಳಿದ್ದರು ಎಂದರು ಸಿದ್ದರಾಮಯ್ಯ. ಸಿದ್ದರಾಮಯ್ಯ ಹೇಳಿದ್ದು‌ ನಿಜ ಎಂದು ದೇಶಪಾಂಡೆ ತಲೆದೂಗಿದರು. ನಾನು (ಸಿದ್ದರಾಮಯ್ಯ) ಇನ್ನೊಂದು ಚುನಾವಣೆಗೆ ಸ್ಫರ್ಧಿಸಿ, ನಿವೃತ್ತಿ ಆಗಬೇಕು ಅಂತಿದ್ದೀನಿ. ನನ್ನ ಜೊತೆ ದೇಶಪಾಂಡೆ ಇರಬೇಕು, ಇನ್ನೊಂದು ಚುನಾವಣೆಗೆ ಸ್ಫರ್ಧೆ ಮಾಡಿ ನೀನು ನಿವೃತ್ತನಾಗಿಬಿಡು ಎಂದು ದೇಶಪಾಂಡೆ ಅವರನ್ನುದ್ದೇಶಿಸಿ ಸಿದ್ದರಾಮಯ್ಯ ಹೇಳಿದರು.

ದೀರ್ಘಾವಧಿಗೆ ಕೈಗಾರಿಕಾ ಸಚಿವ:

1947 ಮಾರ್ಚ್​ 16ರಂದು ಜನಿಸಿದ ದೇಶಪಾಂಡೆ ಅವರು ಬಿಎ, ಎಲ್​ಎಲ್​ಬಿ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ವಜನಿಕ ಸೇವೆಗೆ ಅಂಕಿತರಾದ ದೇಶಪಾಂಡೆ ಅವರು ಜನತಾಪರಿವಾರದೊಂದಿಗೆ ವಿಧಾನಸಭೆ ಪ್ರವೇಶಿಸಿದರು. ಎಸ್​ ಎಂ ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಅತ್ಯಂತ ದೀರ್ಘಾವಧಿಗೆ 13 ವರ್ಷ ಕಾಲ ಕೈಗಾರಿಕಾ ಸಚಿವರಾಗಿದ್ದರು.

ನಾಳೆಯೇ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ: ನಿಗದಿತ ಅವಧಿಗಿಂತ ಒಂದು ದಿನ ಮೊದಲೇ, ನಾಳೆ ಗುರುವಾರವೇ ವಿಧಾನಮಂಡಲ ಅಧಿವೇಶನ ಅಂತ್ಯವಾಗುವ ಸಾಧ್ಯತೆ ಹೆಚ್ಚಿದೆ.

Also Read:

ಮಾಗಿದ ಆರ್​ವಿ ದೇಶಪಾಂಡೆಗೆ ಮರೆವು, ಡಿಕೆ ಶಿವಕುಮಾರ್ ಎದುರು ಮುಜುಗರಕ್ಕೀಡಾದ ಹಿರಿಯ ನಾಯಕ!

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:50 am, Wed, 28 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ