AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 06, 2023 | 4:12 PM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಪ್ರತಿ ಮನೆಗೆ 200 ಯುನಿಟ್​ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದ್ದು, ಇದಕ್ಕೆ ಸೋಮವಾರದಂದು ಹೊಸ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿತ್ತು. ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಸೈಬರ್ ಆಪರೇಟರ್ಸ್ ಹೇಳುತ್ತಿದ್ದಾರೆ. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಕಾಲವಕಾಶಬೇಕಿದೆ.

ಸರ್ಕಾರ ಪೋರ್ಟಲ್ ಐಡಿ ಕೊಟ್ಟ ತಕ್ಷಣವೇ ಅರ್ಜಿ ಸ್ವೀಕಾರವಾಗಲಿದೆ ಎಂದು ಆಪರೇಟರ್ಸ್ ಹೇಳುತ್ತಿದ್ದಾರೆ. ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸರ್ಕಾರದಿಂದ ಪೋರ್ಟಲ್ ಡೀಟೇಲ್ಸ್ ಬಂದ ತಕ್ಷಣವೇ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿಗೆ ಹೊಸ ನಿಬಂಧನೆ, ಉಚಿತ ವಿದ್ಯುತ್​ಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಗೃಹಜ್ಯೋತಿ ಯೋಜನೆ ಪಡೆದುಕೊಳ್ಳಬಹಸುವವರು ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಿದವರಿಗಷ್ಟೇ 200 ಯುನಿಟ್​ವರೆಗೆ ವಿದ್ಯುತ್ ಉಚಿತವಾಗಿ ಸಿಗಲಿದೆ.

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿ

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಯಾಗಲಿದೆ. ಆರಂಭದಲ್ಲಿ ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರೂ ಸರ್ಕಾರ ರಚನೆಯಾದ ನಂತರ ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಇರಲಿದೆ ಎಂದು ಷರತ್ತು ವಿಧಿಸಿತು.

ಇದನ್ನೂ ಓದಿ: Gruha Jyothi scheme: ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ? ಇಲ್ಲಿದೆ ಸ್ಪಷ್ಟ ಚಿತ್ರಣ

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Tue, 6 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ