AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 06, 2023 | 4:12 PM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಪ್ರತಿ ಮನೆಗೆ 200 ಯುನಿಟ್​ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದ್ದು, ಇದಕ್ಕೆ ಸೋಮವಾರದಂದು ಹೊಸ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿತ್ತು. ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಸೈಬರ್ ಆಪರೇಟರ್ಸ್ ಹೇಳುತ್ತಿದ್ದಾರೆ. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಕಾಲವಕಾಶಬೇಕಿದೆ.

ಸರ್ಕಾರ ಪೋರ್ಟಲ್ ಐಡಿ ಕೊಟ್ಟ ತಕ್ಷಣವೇ ಅರ್ಜಿ ಸ್ವೀಕಾರವಾಗಲಿದೆ ಎಂದು ಆಪರೇಟರ್ಸ್ ಹೇಳುತ್ತಿದ್ದಾರೆ. ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸರ್ಕಾರದಿಂದ ಪೋರ್ಟಲ್ ಡೀಟೇಲ್ಸ್ ಬಂದ ತಕ್ಷಣವೇ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿಗೆ ಹೊಸ ನಿಬಂಧನೆ, ಉಚಿತ ವಿದ್ಯುತ್​ಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಗೃಹಜ್ಯೋತಿ ಯೋಜನೆ ಪಡೆದುಕೊಳ್ಳಬಹಸುವವರು ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಿದವರಿಗಷ್ಟೇ 200 ಯುನಿಟ್​ವರೆಗೆ ವಿದ್ಯುತ್ ಉಚಿತವಾಗಿ ಸಿಗಲಿದೆ.

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿ

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಯಾಗಲಿದೆ. ಆರಂಭದಲ್ಲಿ ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರೂ ಸರ್ಕಾರ ರಚನೆಯಾದ ನಂತರ ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಇರಲಿದೆ ಎಂದು ಷರತ್ತು ವಿಧಿಸಿತು.

ಇದನ್ನೂ ಓದಿ: Gruha Jyothi scheme: ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ? ಇಲ್ಲಿದೆ ಸ್ಪಷ್ಟ ಚಿತ್ರಣ

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Tue, 6 June 23