AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Scheme: ಮಹಿಳೆಯರಿಗೆ ಉಚಿತ ಪ್ರಯಾಣ, ಬೆಂಗಳೂರು ಬಸ್​ ಪ್ರಯಾಣಿಕರ ವೇದಿಕೆ ಸರ್ಕಾರದ ಮುಂದಿಟ್ಟ ಆಗ್ರಹಗಳೇನು?

ಶಕ್ತಿ ಯೋಜನೆಯನ್ನು ಜಾರಿಗೆ ತರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸ್ವಾಗತಿಸಿದ್ದು, ಯೋಜನೆ ಪ್ರಾರಂಭಿಸುವ ಮೊದಲು ಕೆಲ ಆಗ್ರಹಗಳನ್ನ ಮುಂದಿಟ್ಟಿದೆ. 

Shakti Scheme: ಮಹಿಳೆಯರಿಗೆ ಉಚಿತ ಪ್ರಯಾಣ, ಬೆಂಗಳೂರು ಬಸ್​ ಪ್ರಯಾಣಿಕರ ವೇದಿಕೆ ಸರ್ಕಾರದ ಮುಂದಿಟ್ಟ ಆಗ್ರಹಗಳೇನು?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 02, 2023 | 8:56 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಘೋಷಿಸಿದ್ದ ಪಂಚ ಯೋಜನೆಗಳನ್ನು (Five Guarantees Schemes) ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಅಧಿಕೃತವಾಗಿ ಶುಕ್ರವಾರ ಘೋಷಣೆ ಮಾಡಿದ್ದಾರೆ. ಐದು ಗ್ಯಾರಂಟಿಗಳ ಪೈಕಿ ಉಚಿತ ಬಸ್ ಯೋಜನೆ ಕೂಡ ಒಂದು. ಉಚಿತ ಬಸ್ ಯೋಜನೆ ಅಡಿಯಲ್ಲಿ ಮಹಿಳೆಯರು ಜೂನ್ 11ರಿಂದ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದ್ದು, ಈ ಯೋಜನೆಯನ್ನು ಬೆಂಗಳೂರು ಬಸ್​ ಪ್ರಯಾಣಿಕರ ವೇದಿಕೆ ಸ್ವಾಗತಿಸಿದೆ. ಜೊತೆಗೆ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸುವ ಮೊದಲು ಈ ಪ್ರಮುಖ ಅಂಶಗಳನ್ನು ಪರಿಗಣಿಸುವಂತೆ ಆಗ್ರಹಿಸಿದೆ.

ಶಕ್ತಿ ಯೋಜನೆಯನ್ನು ಜಾರಿಗೆ ತರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಸ್ವಾಗತಿಸಿದೆ. ಕಳೆದ ಎರಡು ವರ್ಷಗಳಿಂದ ಮಹಿಳೆಯರು, ವಿದ್ಯಾರ್ಥಿಗಳು, ತೃತೀಯ ಲಿಂಗಿ ಸಮುದಾಯ ಮತ್ತು ಹಿರಿಯ ನಾಗರಿಕರಿಗೆ ಉಚಿತ ಬಸ್ ಯೋಜನೆ ಜಾರಿ ಮಾಡುವಂತೆ ಪಟ್ಟುಹಿಡಿದಿತ್ತು.

ಇದನ್ನೂ ಓದಿ: Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ ಉಚಿತ ಪ್ರಯಾಣ?

ಬೆಂಗಳೂರು ಬಸ್​ ಪ್ರಯಾಣಿಕರ ವೇದಿಕೆಯ ಆಗ್ರಹವೇನು?

  • ಎಲ್ಲಾ ಹಿರಿಯ ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ನಾವು ಒತ್ತಾಯಿಸಿದ್ದೇವೆ. ಇದು ಕಾಂಗ್ರೆಸ್ ಭರವಸೆಗಳ ಭಾಗವಲ್ಲದಿದ್ದರೂ, ಅವರ ಪ್ರಣಾಳಿಕೆಯ ಒಂದು ಭಾಗವಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರನ್ನು ಸಹ ಈ ಯೋಜನೆಯಡಿ ಸೇರಿಸಬೇಕೆಂದು ಸರ್ಕಾರವನ್ನು ಮನವಿ ಮಾಡಲಾಗಿದೆ.
  • ಆರ್ಟಿಸಿಗಳಿಗೆ ತಗಲುವ ವೆಚ್ಚವನ್ನು ಆರ್ಟಿಸಿಗಳಿಗೆ ಪಾವತಿಸುವುದಕ್ಕೆ ಲಿಖಿತವಾಗಿ ಬದ್ಧರಾಗುವಂತೆ ಸರ್ಕಾರವನ್ನು ವಿನಂತಿಸಲಾಗಿದೆ. ಈ ಕಾರ್ಯಾವು ಸಾಂಸ್ಥಿಕ ಮತ್ತು ತಾತ್ಕಾಲಿಕ ಅನುದಾನ ಬಿಡುಗಡೆಯಾಗಿರಬಾರದು.
  • ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಗಾಗಿ ಬಸ್​ಗಳನ್ನು ಹೆಚ್ಚಿಸಬೇಕಾಗಿದೆ. ಆರ್​ಟಿಸಿಗಳನ್ನು ಸಹ ತಕ್ಷಣವೇ ನೀಡಬೇಕು. ಚಾಲಕರು ಮತ್ತು ನಿರ್ವಾಹಕರನ್ನು ನೇಮಿಸಿಕೊಳ್ಳಲು ಧನಸಹಾಯ ಮತ್ತು ಅನುಮತಿಯನ್ನು ತಕ್ಷಣ ನೀಡುವಂತೆ ಪತ್ರದಲ್ಲಿ ಕೋರಲಾಗಿದೆ.
  • ರಸ್ತೆ ಮಾರ್ಗಗಳು ಮತ್ತು ಆವರ್ತನದ ದೃಷ್ಟಿಯಿಂದ ಪ್ರಯಾಣದ ಅಂತರಗಳನ್ನು ಸರ್ಕಾರ ತಕ್ಷಣ ಗಮನಿಸಬೇಕು. ಸೂಕ್ತ ಮಾರ್ಗಗಳನ್ನು ಕಲ್ಪಿಸಬೇಕು.
  • ಸರ್ಕಾರ ಮುಂದಿನ ದಿನಗಳಲ್ಲಿ ಬಿಎಂಟಿಸಿ ಹವಾನಿಯಂತ್ರಿತವಲ್ಲದ ಬಸ್​ಗಳ (non-AC buses) ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ಇಲ್ಲದಿದ್ದರೆ ಮಹಿಳೆಯರು ಈ ಯೋಜನೆಯ ಪ್ರಯೋಜನಗಳಿಂದ ವಂಚಿತರಾಗುತ್ತಾರೆ.
  • ಈ ಯೋಜನೆ ಮತ್ತು ಅದಕ್ಕೆ ಮಂಜೂರಾದ ಹಣವು ಕರ್ನಾಟಕ ಮಹಿಳೆಯರ ಭವಿಷ್ಯದ ಹೂಡಿಕೆಯಾಗಿ ಆಗಬೇಕು. ಉತ್ತಮ ಆರೋಗ್ಯ ಮತ್ತು ರಾಜ್ಯದ ಅಭಿವೃದ್ಧಿ ದೃಷ್ಠಿಯಿಂದ ಕೈಗೊಂಡಿರುವ ಈ ಯೋಜನೆಯನ್ನು ಜಾರಿಗೊಳಿಸಿರುವ ಸರ್ಕಾರವನ್ನು ಶ್ಲಾಘಿಸುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ