AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ

ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ
ಶಂಕರ ಪಾಟೀಲ್ ಮುನೇನಕೊಪ್ಪ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on:Aug 27, 2023 | 8:59 PM

Share

ಧಾರವಾಡ, ಆಗಸ್ಟ್ 27: ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ (Shankar Patil Munenakoppa) ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಎನ್​​ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬಿಜೆಪಿಯ ಎಸ್​​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇತ್ತ, ಹೊನ್ನಾಳಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಚಿವರನ್ನು ಭೇಟಿಯಾಗಿ ಇನ್ನಷ್ಟು ಕುತೂಹಲ ಕೆರಳಿಸುತ್ತಿದ್ದಾರೆ.

ಈ ನಡುವೆ ಶಂಕರಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಶಾಸಕ ಕೋನರೆಡ್ಡಿ, ಶಂಕರಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ಆಗಿಲ್ಲ ಎಂದಿದ್ದಾರೆ. ಅಲ್ಲದೆ, ಇಂದು ಮಾತನಾಡಿದ ಸಂತೋಷ್ ಲಾಡ್, ಧಾರವಾಡ ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿಯ ಯಾವ ಶಾಸಕರು, ಪ್ರಮುಖರು ಕಾಂಗ್ರೆಸ್​ಗೆ ಹೋಗುವುದಿಲ್ಲ. ಹಲವಾರು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ವೈಯಕ್ತಿಕ ಕೆಲಸಗಳಾಗಿ ಭೇಟಿಯಾಗಿರಬಹುದು. ಆಪರೇಷನ್ ಹಸ್ತದ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sun, 27 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ