AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ

ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ
ಶಂಕರ ಪಾಟೀಲ್ ಮುನೇನಕೊಪ್ಪ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Aug 27, 2023 | 8:59 PM

Share

ಧಾರವಾಡ, ಆಗಸ್ಟ್ 27: ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ (Shankar Patil Munenakoppa) ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಎನ್​​ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬಿಜೆಪಿಯ ಎಸ್​​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇತ್ತ, ಹೊನ್ನಾಳಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಚಿವರನ್ನು ಭೇಟಿಯಾಗಿ ಇನ್ನಷ್ಟು ಕುತೂಹಲ ಕೆರಳಿಸುತ್ತಿದ್ದಾರೆ.

ಈ ನಡುವೆ ಶಂಕರಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಶಾಸಕ ಕೋನರೆಡ್ಡಿ, ಶಂಕರಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ಆಗಿಲ್ಲ ಎಂದಿದ್ದಾರೆ. ಅಲ್ಲದೆ, ಇಂದು ಮಾತನಾಡಿದ ಸಂತೋಷ್ ಲಾಡ್, ಧಾರವಾಡ ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿಯ ಯಾವ ಶಾಸಕರು, ಪ್ರಮುಖರು ಕಾಂಗ್ರೆಸ್​ಗೆ ಹೋಗುವುದಿಲ್ಲ. ಹಲವಾರು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ವೈಯಕ್ತಿಕ ಕೆಲಸಗಳಾಗಿ ಭೇಟಿಯಾಗಿರಬಹುದು. ಆಪರೇಷನ್ ಹಸ್ತದ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sun, 27 August 23

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ