AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ

ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ
ಶಂಕರ ಪಾಟೀಲ್ ಮುನೇನಕೊಪ್ಪ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi|

Updated on:Aug 27, 2023 | 8:59 PM

Share

ಧಾರವಾಡ, ಆಗಸ್ಟ್ 27: ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ (Shankar Patil Munenakoppa) ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಎನ್​​ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬಿಜೆಪಿಯ ಎಸ್​​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇತ್ತ, ಹೊನ್ನಾಳಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಚಿವರನ್ನು ಭೇಟಿಯಾಗಿ ಇನ್ನಷ್ಟು ಕುತೂಹಲ ಕೆರಳಿಸುತ್ತಿದ್ದಾರೆ.

ಈ ನಡುವೆ ಶಂಕರಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಶಾಸಕ ಕೋನರೆಡ್ಡಿ, ಶಂಕರಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ಆಗಿಲ್ಲ ಎಂದಿದ್ದಾರೆ. ಅಲ್ಲದೆ, ಇಂದು ಮಾತನಾಡಿದ ಸಂತೋಷ್ ಲಾಡ್, ಧಾರವಾಡ ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿಯ ಯಾವ ಶಾಸಕರು, ಪ್ರಮುಖರು ಕಾಂಗ್ರೆಸ್​ಗೆ ಹೋಗುವುದಿಲ್ಲ. ಹಲವಾರು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ವೈಯಕ್ತಿಕ ಕೆಲಸಗಳಾಗಿ ಭೇಟಿಯಾಗಿರಬಹುದು. ಆಪರೇಷನ್ ಹಸ್ತದ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sun, 27 August 23