AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​

ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಕಾರ್ಯಕರ್ತರು ಅಜಿತ್​​ ಪವಾರ್​​ ವಿರುದ್ಧ ಪೋಸ್ಟರ್​​ ಹಾಕುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​
ವೈರಲ್​​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2023 | 1:24 PM

Share

ದೆಹಲಿ: ರಾಜಕೀಯದಲ್ಲಿ ಎಲ್ಲವೂ ಸಹಜವಲ್ಲ, ರಾಜಕೀಯ ಆಟಗಳನ್ನು ನಾಯಕರು ಒಪ್ಪಿಕೊಂಡರು, ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ, ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ, ಎನ್​ಸಿಪಿ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್​​ ಪವಾರ್​​ ಅವರು ಬಿಜೆಪಿ- ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿ- ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆನ್ನೆ (ಜುಲೈ.5) ಎನ್​ಸಿಪಿ ಪಕ್ಷದ ಎರಡು ಬಣಗಳು (ಅಜಿತ್​ ಬಣ ಮತ್ತು ಶರದ್​ ಬಣ) ತಮ್ಮ ಶಾಸಕ ಬಲದ ಪ್ರದರ್ಶನಕ್ಕೆ ಸಭೆ ನಡೆಸಿದೆ. ಆದರೆ ಸಭೆಯ ಹೊರಗಡೆ ಕಾರ್ಯಕರ್ತರ ಅಕ್ರೋಶ ಮುಗಿಲುಮುಟ್ಟಿದೆ. ಈ ಬಗ್ಗೆ ಮಹಾರಾಷ್ಟ್ರದ ಬೀದಿಗಳಲ್ಲಿ ಒಂದು ಪೋಸ್ಟ್​​​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಹೌದು ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಬಾಹುಬಲಿ ಸಿನಿಮಾದ ಕಟ್ಟಪ್ಪ, ಬಾಹುಬಲಿಯನ್ನು ಕೊಲ್ಲುವ ಸೀನ್​​ನ ಫೋಟೋವನ್ನು ಎಡಿಟ್​​ ಮಾಡಿ ಬಾಹುಬಲಿಯಾಗಿ ಶರದ್​​ ಪವಾರ್​, ಕಟ್ಟಪ್ಪನಾಗಿ ಅಜಿತ್​​ ಪವಾರ್​ ಅವರನ್ನು ಪೋಸ್ಟರ್​​ನಲ್ಲಿ ಚಿತ್ರಿಸಿದ್ದಾರೆ. ಇದೀಗ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಇದನ್ನೂ ಓದಿ:Supriya Sule: ಶರದ್ ಪವಾರ್ ಕರೆದಿರುವ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸುಪ್ರಿಯಾ ಸುಳೆ ಮನವಿ

ದೆಹಲಿಯಲ್ಲಿರುವ ಶರದ್​​ ಪವಾರ್​​ ನಿವಾಸದ ಮುಂದೆ ಈ ಪೋಸ್ಟರ್​​ನ್ನು ಹಾಕಿಕೊಂಡಿದ್ದಾರೆ. ಈ ಪೋಸ್ಟರ್​​ನ ಕೆಳಗಡೆ ಇಡೀ ”ದೇಶವು ಒಬ್ಬರ ನಡುವೆ ಅಡಗಿರುವ ದೇಶದ್ರೋಹಿಗಳನ್ನು ಗಮನಿಸುತ್ತಿದೆ. ಸಾರ್ವಜನಿಕರು ಅಂತಹ ವಂಚಕರನ್ನು ಕ್ಷಮಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಶರದ್ ಪವಾರ್ ಮತ್ತು ಅಜಿತ್ ಪವಾರ್ ಅವರನ್ನು ಹೋಲುವ ಬಾಹುಬಲಿ ಪೋಸ್ಟರ್‌ ಹಾಕಿರುವುದು ರಾಜಕೀಯ ವಿವಾದಕ್ಕೆ ಮತ್ತಷ್ಟು ಬಲ ನೀಡಿದೆ.

ನಿನ್ನೆ ಮುಂಬೈನಲ್ಲಿ ನಡೆದ ಎರಡು ಮೆಗಾ ಸಭೆಗಳ ನಂತರ, ಶರದ್ ಪವಾರ್ ಅವರು ತಮ್ಮ ಮುಂದಿನ ನಡೆಯನ್ನು ಯೋಜಿಸಲು ಇಂದು ದೆಹಲಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯನ್ನು ನಡೆಸಲಿದ್ದಾರೆ. ನೆನ್ನೆ ನಡೆದ ಅಜಿತ್​​ ಪವಾರ್​​ ಬೆಂಬಲಿತ ಸಭೆಯಲ್ಲಿ 53 ಶಾಸಕರಲ್ಲಿ 32 ಮಂದಿ ಭಾಗವಹಿಸಿದ್ದಾರೆ, ಉಳಿದವರು ಶರದ್​​ ಪವಾರ್​​ ನೇತೃತ್ವದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇನ್ನಷ್ಟು  ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ