AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​

ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಕಾರ್ಯಕರ್ತರು ಅಜಿತ್​​ ಪವಾರ್​​ ವಿರುದ್ಧ ಪೋಸ್ಟರ್​​ ಹಾಕುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​
ವೈರಲ್​​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2023 | 1:24 PM

Share

ದೆಹಲಿ: ರಾಜಕೀಯದಲ್ಲಿ ಎಲ್ಲವೂ ಸಹಜವಲ್ಲ, ರಾಜಕೀಯ ಆಟಗಳನ್ನು ನಾಯಕರು ಒಪ್ಪಿಕೊಂಡರು, ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ, ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ, ಎನ್​ಸಿಪಿ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್​​ ಪವಾರ್​​ ಅವರು ಬಿಜೆಪಿ- ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿ- ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆನ್ನೆ (ಜುಲೈ.5) ಎನ್​ಸಿಪಿ ಪಕ್ಷದ ಎರಡು ಬಣಗಳು (ಅಜಿತ್​ ಬಣ ಮತ್ತು ಶರದ್​ ಬಣ) ತಮ್ಮ ಶಾಸಕ ಬಲದ ಪ್ರದರ್ಶನಕ್ಕೆ ಸಭೆ ನಡೆಸಿದೆ. ಆದರೆ ಸಭೆಯ ಹೊರಗಡೆ ಕಾರ್ಯಕರ್ತರ ಅಕ್ರೋಶ ಮುಗಿಲುಮುಟ್ಟಿದೆ. ಈ ಬಗ್ಗೆ ಮಹಾರಾಷ್ಟ್ರದ ಬೀದಿಗಳಲ್ಲಿ ಒಂದು ಪೋಸ್ಟ್​​​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಹೌದು ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಬಾಹುಬಲಿ ಸಿನಿಮಾದ ಕಟ್ಟಪ್ಪ, ಬಾಹುಬಲಿಯನ್ನು ಕೊಲ್ಲುವ ಸೀನ್​​ನ ಫೋಟೋವನ್ನು ಎಡಿಟ್​​ ಮಾಡಿ ಬಾಹುಬಲಿಯಾಗಿ ಶರದ್​​ ಪವಾರ್​, ಕಟ್ಟಪ್ಪನಾಗಿ ಅಜಿತ್​​ ಪವಾರ್​ ಅವರನ್ನು ಪೋಸ್ಟರ್​​ನಲ್ಲಿ ಚಿತ್ರಿಸಿದ್ದಾರೆ. ಇದೀಗ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಇದನ್ನೂ ಓದಿ:Supriya Sule: ಶರದ್ ಪವಾರ್ ಕರೆದಿರುವ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸುಪ್ರಿಯಾ ಸುಳೆ ಮನವಿ

ದೆಹಲಿಯಲ್ಲಿರುವ ಶರದ್​​ ಪವಾರ್​​ ನಿವಾಸದ ಮುಂದೆ ಈ ಪೋಸ್ಟರ್​​ನ್ನು ಹಾಕಿಕೊಂಡಿದ್ದಾರೆ. ಈ ಪೋಸ್ಟರ್​​ನ ಕೆಳಗಡೆ ಇಡೀ ”ದೇಶವು ಒಬ್ಬರ ನಡುವೆ ಅಡಗಿರುವ ದೇಶದ್ರೋಹಿಗಳನ್ನು ಗಮನಿಸುತ್ತಿದೆ. ಸಾರ್ವಜನಿಕರು ಅಂತಹ ವಂಚಕರನ್ನು ಕ್ಷಮಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಶರದ್ ಪವಾರ್ ಮತ್ತು ಅಜಿತ್ ಪವಾರ್ ಅವರನ್ನು ಹೋಲುವ ಬಾಹುಬಲಿ ಪೋಸ್ಟರ್‌ ಹಾಕಿರುವುದು ರಾಜಕೀಯ ವಿವಾದಕ್ಕೆ ಮತ್ತಷ್ಟು ಬಲ ನೀಡಿದೆ.

ನಿನ್ನೆ ಮುಂಬೈನಲ್ಲಿ ನಡೆದ ಎರಡು ಮೆಗಾ ಸಭೆಗಳ ನಂತರ, ಶರದ್ ಪವಾರ್ ಅವರು ತಮ್ಮ ಮುಂದಿನ ನಡೆಯನ್ನು ಯೋಜಿಸಲು ಇಂದು ದೆಹಲಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯನ್ನು ನಡೆಸಲಿದ್ದಾರೆ. ನೆನ್ನೆ ನಡೆದ ಅಜಿತ್​​ ಪವಾರ್​​ ಬೆಂಬಲಿತ ಸಭೆಯಲ್ಲಿ 53 ಶಾಸಕರಲ್ಲಿ 32 ಮಂದಿ ಭಾಗವಹಿಸಿದ್ದಾರೆ, ಉಳಿದವರು ಶರದ್​​ ಪವಾರ್​​ ನೇತೃತ್ವದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇನ್ನಷ್ಟು  ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್