AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​

ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಕಾರ್ಯಕರ್ತರು ಅಜಿತ್​​ ಪವಾರ್​​ ವಿರುದ್ಧ ಪೋಸ್ಟರ್​​ ಹಾಕುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Maharashtra Political Crisis: ಬಾಹುಬಲಿಯಾಗಿ ಶರದ್​​ ಪವಾರ್​​, ಕಟ್ಟಪ್ಪನಾಗಿ ಅಜಿತ್​ ಪವಾರ್​, ವೈರಲ್​​ ಆಗುತ್ತಿದೆ ಈ ಪೋಸ್ಟರ್​​
ವೈರಲ್​​ ಫೋಟೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2023 | 1:24 PM

ದೆಹಲಿ: ರಾಜಕೀಯದಲ್ಲಿ ಎಲ್ಲವೂ ಸಹಜವಲ್ಲ, ರಾಜಕೀಯ ಆಟಗಳನ್ನು ನಾಯಕರು ಒಪ್ಪಿಕೊಂಡರು, ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ, ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ, ಎನ್​ಸಿಪಿ ಪಕ್ಷದ ಹಾಗೂ ವಿರೋಧ ಪಕ್ಷದ ನಾಯಕರಾಗಿದ್ದ ಅಜಿತ್​​ ಪವಾರ್​​ ಅವರು ಬಿಜೆಪಿ- ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿ- ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆನ್ನೆ (ಜುಲೈ.5) ಎನ್​ಸಿಪಿ ಪಕ್ಷದ ಎರಡು ಬಣಗಳು (ಅಜಿತ್​ ಬಣ ಮತ್ತು ಶರದ್​ ಬಣ) ತಮ್ಮ ಶಾಸಕ ಬಲದ ಪ್ರದರ್ಶನಕ್ಕೆ ಸಭೆ ನಡೆಸಿದೆ. ಆದರೆ ಸಭೆಯ ಹೊರಗಡೆ ಕಾರ್ಯಕರ್ತರ ಅಕ್ರೋಶ ಮುಗಿಲುಮುಟ್ಟಿದೆ. ಈ ಬಗ್ಗೆ ಮಹಾರಾಷ್ಟ್ರದ ಬೀದಿಗಳಲ್ಲಿ ಒಂದು ಪೋಸ್ಟ್​​​​ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಹೌದು ಅಜಿತ್​​ ಪವಾರ್​​ ಅವರು ಶರದ್​​ ಪವಾರ್​​ ಅವರಿಗೆ ಮೋಸ ಮಾಡಿದ್ದಾರೆ ಎಂದು ಬಾಹುಬಲಿ ಸಿನಿಮಾದ ಕಟ್ಟಪ್ಪ, ಬಾಹುಬಲಿಯನ್ನು ಕೊಲ್ಲುವ ಸೀನ್​​ನ ಫೋಟೋವನ್ನು ಎಡಿಟ್​​ ಮಾಡಿ ಬಾಹುಬಲಿಯಾಗಿ ಶರದ್​​ ಪವಾರ್​, ಕಟ್ಟಪ್ಪನಾಗಿ ಅಜಿತ್​​ ಪವಾರ್​ ಅವರನ್ನು ಪೋಸ್ಟರ್​​ನಲ್ಲಿ ಚಿತ್ರಿಸಿದ್ದಾರೆ. ಇದೀಗ ಎಲ್ಲ ಕಡೆ ವೈರಲ್​​ ಆಗುತ್ತಿದೆ.

ಇದನ್ನೂ ಓದಿ:Supriya Sule: ಶರದ್ ಪವಾರ್ ಕರೆದಿರುವ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸುಪ್ರಿಯಾ ಸುಳೆ ಮನವಿ

ದೆಹಲಿಯಲ್ಲಿರುವ ಶರದ್​​ ಪವಾರ್​​ ನಿವಾಸದ ಮುಂದೆ ಈ ಪೋಸ್ಟರ್​​ನ್ನು ಹಾಕಿಕೊಂಡಿದ್ದಾರೆ. ಈ ಪೋಸ್ಟರ್​​ನ ಕೆಳಗಡೆ ಇಡೀ ”ದೇಶವು ಒಬ್ಬರ ನಡುವೆ ಅಡಗಿರುವ ದೇಶದ್ರೋಹಿಗಳನ್ನು ಗಮನಿಸುತ್ತಿದೆ. ಸಾರ್ವಜನಿಕರು ಅಂತಹ ವಂಚಕರನ್ನು ಕ್ಷಮಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಶರದ್ ಪವಾರ್ ಮತ್ತು ಅಜಿತ್ ಪವಾರ್ ಅವರನ್ನು ಹೋಲುವ ಬಾಹುಬಲಿ ಪೋಸ್ಟರ್‌ ಹಾಕಿರುವುದು ರಾಜಕೀಯ ವಿವಾದಕ್ಕೆ ಮತ್ತಷ್ಟು ಬಲ ನೀಡಿದೆ.

ನಿನ್ನೆ ಮುಂಬೈನಲ್ಲಿ ನಡೆದ ಎರಡು ಮೆಗಾ ಸಭೆಗಳ ನಂತರ, ಶರದ್ ಪವಾರ್ ಅವರು ತಮ್ಮ ಮುಂದಿನ ನಡೆಯನ್ನು ಯೋಜಿಸಲು ಇಂದು ದೆಹಲಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯನ್ನು ನಡೆಸಲಿದ್ದಾರೆ. ನೆನ್ನೆ ನಡೆದ ಅಜಿತ್​​ ಪವಾರ್​​ ಬೆಂಬಲಿತ ಸಭೆಯಲ್ಲಿ 53 ಶಾಸಕರಲ್ಲಿ 32 ಮಂದಿ ಭಾಗವಹಿಸಿದ್ದಾರೆ, ಉಳಿದವರು ಶರದ್​​ ಪವಾರ್​​ ನೇತೃತ್ವದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇನ್ನಷ್ಟು  ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ