AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು

ಬಿಜೆಪಿ ತೊರೆದು ಜೆಡಿಎಸ್​ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್​ ಇದೀಗ ತೆನೆ ಇಳಿಸಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಕೆಲ ನಾಯಕರ ವಿರೋಧದ ನಡುವೆಯೂ ಮಂಜುನಾಥ್​ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು
ಆಯನೂರು ಮಂಜುನಾತ್ ಕಾಂಗ್ರೆಸ್ ಸೇರ್ಪಡೆ
ಪ್ರಸನ್ನ ಗಾಂವ್ಕರ್​
| Edited By: |

Updated on: Aug 24, 2023 | 12:51 PM

Share

ಬೆಂಗಳೂರು, (ಆಗಸ್ಟ್ 24): ನಿರೀಕ್ಷೆಯಂತೆ ಜೆಡಿಎಸ್​ ನಾಯಕ ಆಯನೂರು ಮಂಜುನಾಥ್ (ayanur manjunath), ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್​ (Congress) ಸೇರ್ಪಡೆಯಾದರು. ಇಂದು(ಆಗಸ್ಟ್ 24) ಬೆಂಗಳೂರಿನ ಕಾಂಗ್ರೆಸ್​ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಈ ವೇಳೆ ಶಿವಮೊಗ್ಗ (Shivamogga) ಜಿಲ್ಲಾ ಕಾಂಗ್ರೆಸ್ ನಾಯಕರಾದ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಯಾವುದೇ ಷರತ್ತುಗಳು ಇಲ್ಲದೆಯೇ ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗಿದ್ದೇನೆ. ನಾನು ಹಿಂದೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ. ಆದರೆ ಈಗ ಅಂತ ಯಾವ ಕಂಡಿಷನ್ ಕೂಡ ಹಾಕಿಲ್ಲ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕುತ್ತೇನೆ. ಕೆಲವು ಜಿಲ್ಲಾ ನಾಯಕರು ಸಿಲ್ಲಿಯಾಗಿ ಮಾತಾಡಿರಬಹುದು. ಆ ಬಗ್ಗೆ ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೆಸರು ಉಲ್ಲೇಖಿಸಲದೇ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಆಯನೂರು ಮಂಜುನಾಥ್ ಸೇರ್ಪಡೆಗೆ ಕಾಂಗ್ರೆಸ್​​ನಲ್ಲಿ ವಿರೋಧ, ಬಿಜೆಪಿ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಕೈ ಮುಖಂಡ

ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ ವಿರೋಧ ವ್ಯಕ್ತಪಡಿಸಿದ್ದರು. ಈ ಮೊದಲು ಸಿದ್ದರಾಮಯ್ಯನರವರ ಬಗ್ಗೆ ಮಾತನಾಡಿ, ಈಗ ಪಕ್ಷ ಸೇರ್ಪಡೆಗೆ ಅವರ ಮನೆ ಬಾಗಿಲನ್ನೇ ತಟ್ಟುತ್ತಿದ್ದಾರೆ. ಮಂಜುನಾಥ್ ವರ್ಷದಲ್ಲಿ ಮೂರು ಕಾಲ ಬದಲಾದಂತೆ ಪಕ್ಷ ಬದಲಿಸುತ್ತಾರೆ. ಚಳಿಗಾಲದಲ್ಲಿ ಬಿಜೆಪಿಯಲ್ಲಿದ್ದು, ಬೇಸಿಗೆಯಲ್ಲಿ ಕಾಂಗ್ರೆಸ್ ಬಾಗಿಲು ಮುಚ್ಚಿದೆ ಎಂದಾಗ ಜೆಡಿಎಸ್ ಪಕ್ಷ ಸೇರಿದ್ದರು. ಈಗ ಮಳೆಗಾಲದಲ್ಲಿ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಪಕ್ಷದಿಂದ ಪಕ್ಷಕ್ಕೆ ಹಾರುವ ಮೂಲಕ ಯುವಕರಿಗೆ ಏನು ಸಂದೇಶ ನೀಡುತ್ತಿರಾ? ನಿಮಗೆ ಧಮ್ ಇದ್ದರೆ ನೀವಿರುವ ಪಕ್ಷದಲ್ಲೇ ಇದ್ದು ಸಾಧಿಸಿ ತೋರಸಿ ಎಂದು ಸವಾಲು ಹಾಕಿದ್ದರು. ಈ ವಿರೋಧದ ನಡುವೆಯೇ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಇದು ಮುಂದೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​ನಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ