Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು

ಬಿಜೆಪಿ ತೊರೆದು ಜೆಡಿಎಸ್​ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್​ ಇದೀಗ ತೆನೆ ಇಳಿಸಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಕೆಲ ನಾಯಕರ ವಿರೋಧದ ನಡುವೆಯೂ ಮಂಜುನಾಥ್​ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು
ಆಯನೂರು ಮಂಜುನಾತ್ ಕಾಂಗ್ರೆಸ್ ಸೇರ್ಪಡೆ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Aug 24, 2023 | 12:51 PM

ಬೆಂಗಳೂರು, (ಆಗಸ್ಟ್ 24): ನಿರೀಕ್ಷೆಯಂತೆ ಜೆಡಿಎಸ್​ ನಾಯಕ ಆಯನೂರು ಮಂಜುನಾಥ್ (ayanur manjunath), ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್​ (Congress) ಸೇರ್ಪಡೆಯಾದರು. ಇಂದು(ಆಗಸ್ಟ್ 24) ಬೆಂಗಳೂರಿನ ಕಾಂಗ್ರೆಸ್​ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಈ ವೇಳೆ ಶಿವಮೊಗ್ಗ (Shivamogga) ಜಿಲ್ಲಾ ಕಾಂಗ್ರೆಸ್ ನಾಯಕರಾದ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಯಾವುದೇ ಷರತ್ತುಗಳು ಇಲ್ಲದೆಯೇ ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗಿದ್ದೇನೆ. ನಾನು ಹಿಂದೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ. ಆದರೆ ಈಗ ಅಂತ ಯಾವ ಕಂಡಿಷನ್ ಕೂಡ ಹಾಕಿಲ್ಲ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕುತ್ತೇನೆ. ಕೆಲವು ಜಿಲ್ಲಾ ನಾಯಕರು ಸಿಲ್ಲಿಯಾಗಿ ಮಾತಾಡಿರಬಹುದು. ಆ ಬಗ್ಗೆ ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೆಸರು ಉಲ್ಲೇಖಿಸಲದೇ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಆಯನೂರು ಮಂಜುನಾಥ್ ಸೇರ್ಪಡೆಗೆ ಕಾಂಗ್ರೆಸ್​​ನಲ್ಲಿ ವಿರೋಧ, ಬಿಜೆಪಿ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಕೈ ಮುಖಂಡ

ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ ವಿರೋಧ ವ್ಯಕ್ತಪಡಿಸಿದ್ದರು. ಈ ಮೊದಲು ಸಿದ್ದರಾಮಯ್ಯನರವರ ಬಗ್ಗೆ ಮಾತನಾಡಿ, ಈಗ ಪಕ್ಷ ಸೇರ್ಪಡೆಗೆ ಅವರ ಮನೆ ಬಾಗಿಲನ್ನೇ ತಟ್ಟುತ್ತಿದ್ದಾರೆ. ಮಂಜುನಾಥ್ ವರ್ಷದಲ್ಲಿ ಮೂರು ಕಾಲ ಬದಲಾದಂತೆ ಪಕ್ಷ ಬದಲಿಸುತ್ತಾರೆ. ಚಳಿಗಾಲದಲ್ಲಿ ಬಿಜೆಪಿಯಲ್ಲಿದ್ದು, ಬೇಸಿಗೆಯಲ್ಲಿ ಕಾಂಗ್ರೆಸ್ ಬಾಗಿಲು ಮುಚ್ಚಿದೆ ಎಂದಾಗ ಜೆಡಿಎಸ್ ಪಕ್ಷ ಸೇರಿದ್ದರು. ಈಗ ಮಳೆಗಾಲದಲ್ಲಿ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಪಕ್ಷದಿಂದ ಪಕ್ಷಕ್ಕೆ ಹಾರುವ ಮೂಲಕ ಯುವಕರಿಗೆ ಏನು ಸಂದೇಶ ನೀಡುತ್ತಿರಾ? ನಿಮಗೆ ಧಮ್ ಇದ್ದರೆ ನೀವಿರುವ ಪಕ್ಷದಲ್ಲೇ ಇದ್ದು ಸಾಧಿಸಿ ತೋರಸಿ ಎಂದು ಸವಾಲು ಹಾಕಿದ್ದರು. ಈ ವಿರೋಧದ ನಡುವೆಯೇ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಇದು ಮುಂದೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​ನಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ