AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟ ಶಿವರಾಜ ತಂಗಡಗಿ

ಉತ್ತರ ಕನ್ನಡದ ಕುಮಟಾದಲ್ಲಿ ಮಾತನಾಡಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದನ್ನು ಕಾಂಗ್ರೆಸ್ ನಾಯಕರು ಖಂಡಿಸುತ್ತಿದ್ದಾರೆ. ಇದೀಗ ಶಿವರಾಜ ತಂಗಡಗಿ ಅವರು ಆಕ್ರೋಶವಾಗಿ ಮಾತನಾಡುತ್ತಾ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟಿದ್ದಾರೆ.

ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟ ಶಿವರಾಜ ತಂಗಡಗಿ
ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಶಿವರಾಜ ತಂಗಡಗಿ
ಸಂಜಯ್ಯಾ ಚಿಕ್ಕಮಠ
| Updated By: Rakesh Nayak Manchi|

Updated on:Jan 14, 2024 | 6:26 PM

Share

ಕೊಪ್ಪಳ, ಜ.14: ಉತ್ತರ ಕನ್ನಡದ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಅನಂತ ಕುಮಾರ್ ಹೆಗಡೆ ಅವರನ್ನು ನಾಯಿಗೆ ಹೋಲಿಸುವ ಮೂಲಕ ನಾಲಗೆ ಹರಿಬಿಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದರೆ ಅಲ್ಲಿಗೆ ಬಂದು ಉತ್ತರ ನೀಡುತ್ತೇನೆ ಮಗನೆ. ಇದು ಫಸ್ಟ್ ಆ್ಯಂಡ್ ಲಾಸ್ಟ್ ವಾರ್ನಿಂಗ್, ಹುಷಾರ್. ಸಿದ್ದರಾಮಯ್ಯ ಕಾಲಿನ ಧೂಳಿಗೂ ಅನಂತಕುಮಾರ್ ಹೆಗಡೆ ಸಮವಲ್ಲ. ಇಂತಹ ನಾಯಿಗಳಿಗೆ ನಾವು ಯಾವಾಗ ಬೇಕಾದರೂ ಬುದ್ಧಿ ಕಲಿಸುತ್ತೇವೆ. ಆದರೆ ನಾವು ಕೆಳಮಟ್ಟಕ್ಕೆ ಇಳಿದು ಮಾತಾಡಬಾರದೆಂದು ಸುಮ್ಮನಿದ್ದೇವೆ ಎಂದರು.

ಅನಂತ್ ಕುಮಾರ್ ಹೇಳಿದ್ದೇನು?

ಸಿದ್ದರಾಮಯ್ಯ ಅವರು ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ್ದ ಅನಂತ್ ಕುಮಾರ್ ಹೆಗಡೆ, ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ 22 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಇದಕ್ಕೂ ಮುನ್ನಡ ಮಾತನಾಡಿದ್ದ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿ ನಿರ್ನಾಮವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರ್ಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ತಾನ ಕಾಣುತ್ತದೆ ಎಂದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sun, 14 January 24

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ