AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯ: ವರುಣಾದಲ್ಲಿ ಕೃತಜ್ಞತಾ ಸಮಾವೇಶ

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿದೆ. ಅದರಂತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವ ಕ್ಷೇತ್ರ ವರುಣಾಕ್ಕೆ ಆಗಮಿಸುತ್ತಿದ್ದು, ವರುಣಾ ಕ್ಷೇತ್ರದ ಜನರಿಗೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯ: ವರುಣಾದಲ್ಲಿ ಕೃತಜ್ಞತಾ ಸಮಾವೇಶ
ಸಿಎಂ ಸಿದ್ದರಾಮಯ್ಯ ವರುಣಾಕ್ಕೆ ಭೇಟಿ
ಕಿರಣ್ ಹನುಮಂತ್​ ಮಾದಾರ್
|

Updated on:Jun 10, 2023 | 7:16 AM

Share

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿದೆ. ಅದರಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸ್ವ ಕ್ಷೇತ್ರ ವರುಣಾ(Varuna)ದಿಂದ ಸ್ಪರ್ಧಿಸಿ ಬಿಜೆಪಿಯ ವಿ.ಸೋಮಣ್ಣ ಅವರನ್ನ ಸೋಲಿಸಿ, ಮುಖ್ಯಮಂತ್ರಿ ಸ್ಥಾನವನ್ನ ಅಲಕಂರಿಸಿದ್ದಾರೆ. ಇದೀಗ ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಇಂದು (ಜೂ.10) ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಳಿಗೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ವರುಣ ಕ್ಷೇತ್ರದ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತೆ

ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯನವರು ಹೊರಡಲಿದ್ದು, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್​ಗೆ ಆಗಮಿಸಲಿದ್ದಾರೆ. ಬಳಿಕ 12.35ಕ್ಕೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಧ್ಯಾಹ್ನ 2.35ರವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ಮಧ್ಯಾಹ್ನ 2.45ಕ್ಕೆ ಸುತ್ತೂರು ಮಠಕ್ಕೆ ಆಗಮಿಸಲಿದ್ದಾರೆ. ಅಲ್ಲಿ ಸುತ್ತೂರು ಶ್ರಿಗಳನ್ನು ಭೇಟಿ ಮಾಡಿ‌ ಆಶೀರ್ವಾದ ಪಡೆದು, ಬಳಿಕ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ, ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಜೂ.11) ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಾಸ್​ ಆಗಲಿದ್ದಾರೆ.

ಇದನ್ನೂ ಓದಿ:CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ

ಸ್ವಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ‌ ಹಿನ್ನೆಲೆ ಬಂಪರ್ ಕೊಡುಗೆ ನಿರೀಕ್ಷೆಯಲ್ಲಿ ವರುಣ ಕ್ಷೇತ್ರದ ಜನರು

ಸ್ವಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ದರಾಮಯ್ಯನವರು ಭೇಟಿ ನೀಡುತ್ತಿದ್ದು, ಈ ಹಿನ್ನಲೆ ವರುಣ ಕ್ಷೇತ್ರದ ಜನರು ಬಂಪರ್ ಕೊಡುಗೆ ನಿರೀಕ್ಷೆಯಲ್ಲಿದ್ದಾರೆ. ಇಂದೇ ವರುಣ ಕ್ಷೇತ್ರದಲ್ಲಿ ತಾಲೂಕು ಕೇಂದ್ರ ಘೋಷಣೆ ಮಾಡುತ್ತಾರಾ ಸಿಎಂ ಸಿದ್ದರಾಮಯ್ಯ? ಹೌದು ಚುನಾವಣೆ ವೇಳೆ ನಂಜನಗೂಡು, ಟಿ.ನರಸೀಪುರ ಹಾಗೂ ಮೈಸೂರು ತಾಲೂಕಗಳಿಗೆ ಹಂಚಿ ಹೋಗಿರುವ ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುವ ಬಗ್ಗೆ ಚರ್ಚೆಯಾಗಿತ್ತು.  ಇದೀಗ ಜನರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸುತ್ತಿರುವ ಸಿಎಂ ಸಿದ್ದಾಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ತಾಲೂಕು ಕೇಂದ್ರ ಘೋಷಣೆ ಮಾಡುತ್ತಾರ ? ಕಾದು ನೋಡಬೇಕಿದೆ.

​ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:16 am, Sat, 10 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!