AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ: ಸಮುದಾಯದ ಕಾರ್ಯಕ್ರಮದಲ್ಲಿ ಉಭಯ ನಾಯಕರ ಮುನಿಸು ಬಹಿರಂಗ

ರಾಜಕೀಯ ಬದ್ಧ ವೈರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ನಡುವಿನ ಮುಸುಕಿನ ಗುದ್ದಾಟ ಸಮುದಾಯದ ಕಾರ್ಯಕ್ರದಲ್ಲಿ ಬಹಿರಂಗವಾಗಿದೆ.

ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ: ಸಮುದಾಯದ ಕಾರ್ಯಕ್ರಮದಲ್ಲಿ ಉಭಯ ನಾಯಕರ ಮುನಿಸು ಬಹಿರಂಗ
ಮಠದ ಭೂಮಿ ಪೂಜೆ ಹಾಗೂ ಅಭಿನಂದನಾ ಕಾರ್ಯಕ್ರಮ
Anil Kalkere
| Edited By: |

Updated on: Jul 02, 2023 | 6:55 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ರಾಜಕೀಯ ಬದ್ಧವೈರಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹೌದು…ಇಂದು (ಜುಲೈ 02) ಬೆಂಗಳೂರಿನ (Bengaluru) ಕೇತೋಹಳ್ಳಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಕುರುಬ ಸಮುದಾಯದ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಪಾಲ್ಗೊಂಡಿದ್ದರು. ಆದ್ರೆ, ಈ ವೇಳೆ ಈಶ್ವರಪ್ಪನವರಿಗೆ ಸನ್ಮಾನಿಸಲು ಸಿದ್ದರಾಮಯ್ಯ ನಿರಾಕರಿಸಿರುವ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಬೇಕೆಂದು 8 ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿದ್ರಲ್ಲ ಅದು ಕುರುಬರ ಗತ್ತು: ನಿರಂಜನಾನಂದಪುರಿಶ್ರೀ

ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ (niranjanananda Puri Swamiji) ಅವರು ಕೆಎಸ್​ ಈಶ್ವರಪ್ಪ ಅವರಿಗೆ ಸನ್ಮಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಳಿಕೊಂಡಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ನೀವೇ ಸನ್ಮಾನಿಸಿ ಎಂದು ಕೈಸನ್ನೇ ಮಾಡಿದ್ದಾರೆ.  ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.  ಸಿದ್ದರಾಮಯ್ಯ ಅವರು ಈಶ್ವರಪ್ಪನವರನ್ನು ಸನ್ಮಾನಿಸಿಸಲು ಬೇಕಂತಲೇ ಹಿಂಜರಿದಿದ್ದಾರೋ ಅಥವಾ ಸಾಮಾನ್ಯವಾಗಿ ನೀವೇ ಮಾಡಿ ಮುಗಿಸಿ ಎನ್ನುವ ಅರ್ಥದಲ್ಲಿ ಕೈಸನ್ನೇ ಮಾಡಿ ಹೇಳಿದ್ದಾರೋ ಗೊತ್ತಿಲ್ಲ.

ಆಗಿದ್ದೇನು?

ಈಶ್ವರಪ್ಪನವರು ಮಠದ ಶ್ರೀರಕ್ಷೆ ಸ್ವೀಕರಿಸುವಂತೆ ನಿರೂಪಕರು ಮೈಕ್​ನಲ್ಲಿ ಹೇಳಿದ್ದಾರೆ. ಅದರಂತೆ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಈಶ್ವರಪ್ಪ ಅವರಿಗೆ ಸನ್ಮಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲು ನೀಡಲು ಮುಂದಾಗಿದ್ದಾರೆ. ಆದ್ರೆ, ಸಿದ್ದರಾಮಯ್ಯ ಸನ್ಮಾನಿಸಲು ನಿರಾಕರಿಸಿ, ನೀವೆ ಮಾಡಿ ಎಂದಿದ್ದಾರೆ. ಕೊನೆಗೆ ಶ್ರೀಗಳೇ ಈಶ್ವರಪ್ಪರನ್ನು ಸನ್ಮಾನಿಸಿದರು. ಈ ಮೂಲಕ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ನಡುವಿನ ರಾಜಕೀಯ ಗುದ್ದಾಟ ಸಮುದಾಯದ ವೇದಿಕೆ ಮೇಲೆ ಬಹಿರಂಗವಾದಂತಾಯ್ತು.

ಈಶ್ವರಪ್ಪ ಹೋದಲ್ಲಿ ಬಂದಲೆಲ್ಲ ಸಿದ್ದರಾಮಯ್ಯ ವಿರುದ್ಧ ಮಾತನಾಡದೇ ಇರುವುದಿಲ್ಲ. ಏನಾದರೂ ಒಂದು ವಿಚಾರಕ್ಕೆ ಸಿದ್ದರಾಮಯ್ಯ ವಿರುದ್ಧ ತೆಗಳುತ್ತಲೇ ಇರುತ್ತಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ