AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್

ಕರ್ನಾಟಕ ಕಾಂಗ್ರೆಸ್​ನ ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸರ್ಕಸ್ ನಡೆಸುತ್ತಿದ್ದಾರೆ.

ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್
ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್Image Credit source: PTI
Follow us
Rakesh Nayak Manchi
|

Updated on:May 22, 2023 | 9:55 PM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನ (Karnataka Congress) ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸರ್ಕಸ್ ನಡೆಸುತ್ತಿದ್ದು, ಯಾರಿಗೆ ಸಚಿವ ಸ್ಥಾನ ನೀಡೋದಪ್ಪಾ ಅಂತ ಹೈಕಮಾಂಡ್​ಗ್ ತಲೆ ಬಿಸಿಯಾಗಿದೆ. ಸದ್ಯ ಇಂದು ವಿಧಾನಸಭೆ ಅಧಿಕವೇಶ ಆರಂಭಗೊಂಡಿದ್ದು, ಮೇ 24ರಂದು ಮುಕ್ತಾಯವಾಗಲಿದೆ. ನಂತರ ಸಿಎಂ ಮತ್ತು ಡಿಸಿಎಂ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಕಸರತ್ತು ನಡೆಸುತ್ತಿರುವ ಸಿದ್ದರಾಮಯ್ಯ ಅವರು, ರಣತಂತ್ರ ರೂಪಿಸಲು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕ ಭೈರತಿ ಸುರೇಶ್ ಅವರ ಜೊತೆ ಗೌಪ್ಯ ಸ್ಥಳದಲ್ಲಿ ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ನಾಯಕರ ನಡುವೆ ಮುಂದಿನ ನಡೆ ಬಗ್ಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ; ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಅದರಂತೆ ಸಿಎಂ ಸ್ಥಾನ ಸಿದ್ದರಾಮಯ್ಯ ಪಾಲಾಗಿದ್ದು, ಡಿಕೆ ಶಿವಕುಮಾರ್ ಅವರು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಪೈಕಿ ಹೆಚ್ಚಿನವರು ಸಿದ್ದರಾಮಯ್ಯ ಅವರ ಬಣಕ್ಕೆ ಸೇರಿದವರಾಗಿದ್ದಾರೆ. ಸದ್ಯ ಸಂಪೂರ್ಣ ಸಂಪುಟ ರಚನೆಗೆ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು, ಮೇ 24ರ ಒಳಗಾಗಿ ಪೂರ್ಣಗೊಳಿಸುವುದಾಗಿ ಹೈಕಮಾಂಡ್ ಸೂಚಿಸಿದೆ. ಆದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗಲಿದೆ ಎಂಬದನ್ನು ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 pm, Mon, 22 May 23

ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ