AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿದೆ. ಆದ್ರೆ, ಸಿಎಂ ತವರು ಜಿಲ್ಲೆ ಮೈಸೂರು ಕಾಂಗ್ರೆಸ್​ನಲ್ಲಿ ನಾಯಕರ ಆತಂರಿಕೆ ಕಚ್ಚಾಟ ಬಹಿರಂಗವಾಗಿದೆ.

ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?
ಪಿ ವಾಸು
ರಾಮ್​, ಮೈಸೂರು
| Edited By: |

Updated on: Jul 18, 2023 | 11:10 AM

Share

ಮೈಸೂರು, (ಜುಲೈ 18): ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆ ಮೈಸೂರು(Mysuru) ಕಾಂಗ್ರೆಸ್​​ನಲ್ಲಿ (Congress) ಅಂತರಿಕ ಜಗಳ ತಾರಕಕ್ಕೇರಿದ್ದು, ಇದೀಗ ಬಯಲಿಗೆ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಲಿಲ್ಲವೆಂದು ಮಾಜಿ ಶಾಸಕ ಪಿ ವಾಸು(p vasu) ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದು, ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ಮಾಜಿ ನಗರಸಭೆ ಸದಸ್ಯ, ಸಿದ್ದರಾಮಯ್ಯನವರ ಬೆಂಬಲಿಗ ಆರ್.ಸುನಂದಕುಮಾರ್ ಅವರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವು ಕೆಲಸ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸುನಂದಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಪಿ ವಾಸು ವಿರುದ್ಧ ಸಿದ್ದರಾಮಯ್ಯನವರೇ ಸುನಂದಕುಮಾರ್ ಅವರನ್ನು ಛೂ ಬಿಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದು, ವಾಸು ವಿರುದ್ಧ ಪಕ್ಷ ಏನು ಕ್ರಮಕೈಗೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಾಸು ಅವರ ಪುತ್ರ ಕವೀಶ್‌ಗೌಡ ಅವರು ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಮಗ ಬಿಜೆಪಿ ಸೇರಿದ್ದೆ ತಡ ಮಾಜಿ ಶಾಸಕ ವಾಸು ವಿಚಲಿತರಾಗಿದ್ದರು. ಅಲ್ಲದೇ ಅಪ್ಪ ಕಾಂಗ್ರೆಸ್, ಮಗ ಬಿಜೆಪಿ ಅಂತೆಲ್ಲ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಿಜೆಪಿ ಸೇರಿದ್ದ ವಾಸು ಪುತ್ರ ಕವೀಶ್‌ಗೌಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು