Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿದೆ. ಆದ್ರೆ, ಸಿಎಂ ತವರು ಜಿಲ್ಲೆ ಮೈಸೂರು ಕಾಂಗ್ರೆಸ್​ನಲ್ಲಿ ನಾಯಕರ ಆತಂರಿಕೆ ಕಚ್ಚಾಟ ಬಹಿರಂಗವಾಗಿದೆ.

ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?
ಪಿ ವಾಸು
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 18, 2023 | 11:10 AM

ಮೈಸೂರು, (ಜುಲೈ 18): ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆ ಮೈಸೂರು(Mysuru) ಕಾಂಗ್ರೆಸ್​​ನಲ್ಲಿ (Congress) ಅಂತರಿಕ ಜಗಳ ತಾರಕಕ್ಕೇರಿದ್ದು, ಇದೀಗ ಬಯಲಿಗೆ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಲಿಲ್ಲವೆಂದು ಮಾಜಿ ಶಾಸಕ ಪಿ ವಾಸು(p vasu) ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದು, ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ಮಾಜಿ ನಗರಸಭೆ ಸದಸ್ಯ, ಸಿದ್ದರಾಮಯ್ಯನವರ ಬೆಂಬಲಿಗ ಆರ್.ಸುನಂದಕುಮಾರ್ ಅವರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವು ಕೆಲಸ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸುನಂದಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಪಿ ವಾಸು ವಿರುದ್ಧ ಸಿದ್ದರಾಮಯ್ಯನವರೇ ಸುನಂದಕುಮಾರ್ ಅವರನ್ನು ಛೂ ಬಿಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದು, ವಾಸು ವಿರುದ್ಧ ಪಕ್ಷ ಏನು ಕ್ರಮಕೈಗೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಾಸು ಅವರ ಪುತ್ರ ಕವೀಶ್‌ಗೌಡ ಅವರು ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಮಗ ಬಿಜೆಪಿ ಸೇರಿದ್ದೆ ತಡ ಮಾಜಿ ಶಾಸಕ ವಾಸು ವಿಚಲಿತರಾಗಿದ್ದರು. ಅಲ್ಲದೇ ಅಪ್ಪ ಕಾಂಗ್ರೆಸ್, ಮಗ ಬಿಜೆಪಿ ಅಂತೆಲ್ಲ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಿಜೆಪಿ ಸೇರಿದ್ದ ವಾಸು ಪುತ್ರ ಕವೀಶ್‌ಗೌಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ