AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತೀಂದ್ರ ವಿಡಿಯೋ ಆರೋಪಕ್ಕೆ ಸಾಕ್ಷಿ ಸಮೇತ ಹೆಚ್​ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮಾಜಿ ಶಾಸಕ ಯತೀಂದ್ರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ಇದೀಗ ದಾಖಲೆ ಬಿಡುಗಡೆ ಮಾಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿಎಸ್‌ಆರ್ ಪಂಢ್‌ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. 

ಯತೀಂದ್ರ ವಿಡಿಯೋ ಆರೋಪಕ್ಕೆ ಸಾಕ್ಷಿ ಸಮೇತ ಹೆಚ್​ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಗಂಗಾಧರ​ ಬ. ಸಾಬೋಜಿ
|

Updated on:Nov 16, 2023 | 4:55 PM

Share

ಬೆಂಗಳೂರು, ನವೆಂಬರ್​​​ 16: ಸಿಎಂ ಸಿದ್ದರಾಮಯ್ಯ (Siddaramaiah) ಮಾಜಿ ಶಾಸಕ ಪುತ್ರ ಯತೀಂದ್ರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ಇದೀಗ ದಾಖಲೆ ಬಿಡುಗಡೆ ಮಾಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯತೀಂದ್ರ ಮಾತನಾಡಿದ್ದು ಸಿಎಸ್‌ಆರ್ ಫಂಡ್‌ ಬಗ್ಗೆ ಎಂದಿದ್ದ ಸಿಎಂ, ಇದೀಗ ಸಿಎಸ್‌ಆರ್ ಪಂಢ್‌ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್​ಡಿ ಕುಮಾರಸ್ವಾಮಿ  ಅವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಪೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕಮಿಷನ್​ನಲ್ಲಿ ಮುಳುಗೇಳುತ್ತಿದ್ದ ಹೆಚ್​ಡಿಕೆಗೆ ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಲಂಚದ ವ್ಯವಹಾರಗಳೇ: ಸಿದ್ದರಾಮಯ್ಯ ತಿರುಗೇಟು

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:46 pm, Thu, 16 November 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ