AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದು ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಈ ಬಗ್ಗೆ ಕೆಎಸ್ ಈಶ್ವರಪ್ಪ ಮಾತನಾಡಿ ಸಿದ್ದರಾಮಯ್ಯ ಮುಸಲ್ಮಾನರೇ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 13, 2023 | 6:40 PM

Share

ಹುಬ್ಬಳ್ಳಿ, (ಡಿಸೆಂಬರ್ 13): ಮುಸ್ಲಿಮರ (Muslim) ಜೊತೆಗೆ ನಿಲ್ಲುತ್ತೇನೆ ಎನ್ನುವುದಲ್ಲ ಸಿದ್ದರಾಮಯ್ಯ(Siddaramaiah) ಮುಸಲ್ಮಾನರೇ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ(KS Eshwarappa)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಡಿಕೆ ಶಿವಕುಮಾರ್ ಮುಸಲ್ಮಾನರನ್ನು ಮೈ ಬ್ರದರ್ ಎಂದು ಕರೆದರು. ಇದರ ಅರ್ಥ ಏನು? ಮುಸ್ಲಿಂರನ್ನ ತೃಪ್ತಿ ಪಡಿಸಲು ಯಾವ ಮಟ್ಟಕ್ಕೆ ಹೋಗಲು ಅವರು ಸಿದ್ದರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಬ್ರದರ್ ಎನ್ನುವುದು ಏನಣ್ಣ ಚೆನ್ನಾಗಿದೀವಿ ಅನ್ನೋ ಅರ್ಥದಲ್ಲಿ. ವಯಸ್ಸದಾವರನ್ನು ಬ್ರದರ್ ಅಂತಾರೆ. ಸಿದ್ದರಾಮಯ್ಯರದ್ದು ಸ್ವಾರ್ಥ. ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಎಂದು ಕರೆಯುತ್ತಾರೆ. ಎಷ್ಟರ ಮಟ್ಟಿಗೆ ಸೊಕ್ಕು ಇರಬೇಕು ಎಂದು ಕಿಡಿಕಾರಿದರು.

ತೆಲಂಗಾಣದಲ್ಲಿ ಎಲ್ಲ ಮುಸ್ಲಿಮರು ಒಗ್ಗಟ್ಟಾಗಿ ಇರಿ ಎಂದರು. ಸೊಕ್ಕಿನ ಮಾತನ್ನು ಕಾಂಗ್ರೆಸ್ನವರು ‌ಮಾತಾಡಿದ್ದಾರೆ. ಇದನ್ನು ಸಿದ್ದರಾಮಯ್ಯ ಏನು ಮಾತನಾಡಿದ್ದೇನೆಂದು ಸಮರ್ಥನೆ ಮಾಡಿಕೊಂಡರು‌. ಸಿದ್ದರಾಮಯ್ಯ ಹಿಂದೆ ಹೀಗೆ ಮಾಡಿ ಅಧಿಕಾರ ಕಳೆದುಕೊಂಡರು. ಆದರೂ ಅವರಿಗೆ ಬುದ್ದಿ ಬಂದಿಲ್ಲ. ಸಿದ್ದರಾಮಯ್ಯ ಎಲ್ಲ ಸಮಾಜವನ್ನು ಮೈಮೇಲೆ ಎಳೆದುಕೊಂಡರು. ಜಾತಿ ಒಡೆದ ನಂತರ ಮುಸ್ಲಿಮರು ಮಾತ್ರ ಗತಿ ಎಂದು 10 ಸಾವಿರ ಕೋಟಿ ರೂಪಾಯಿ ಕೊಡುತ್ತೇನೆ ಎಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಸಮಾವೇಶದಲ್ಲಿ ಭಯೋತ್ಪಾದಕ ನಂಟು ಇರುವ ವ್ಯಕ್ತಿ ಜೊತ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿರುವ ವಿಚಾರದ ಬಗ್ಗೆ ಮಾತನಾಡಿ. ಅದು ಪ್ರೂವ್ ಆಗಬೇಕು,ಅದು ಅವರ ವಯಕ್ತಿಕ ವಿಚಾರ. ನಾವು ಮುಸ್ಲಿಮರ ವಿರೋಧಿ‌ ಅಲ್ಲ. ನಾವು ರಾಷ್ಟ್ರದ್ರೋಹಿ ಮುಸ್ಲಿಮರ ವಿರೋಧಿ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು