ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದು ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಈ ಬಗ್ಗೆ ಕೆಎಸ್ ಈಶ್ವರಪ್ಪ ಮಾತನಾಡಿ ಸಿದ್ದರಾಮಯ್ಯ ಮುಸಲ್ಮಾನರೇ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!
Edited By:

Updated on: Dec 13, 2023 | 6:40 PM

ಹುಬ್ಬಳ್ಳಿ, (ಡಿಸೆಂಬರ್ 13): ಮುಸ್ಲಿಮರ (Muslim) ಜೊತೆಗೆ ನಿಲ್ಲುತ್ತೇನೆ ಎನ್ನುವುದಲ್ಲ ಸಿದ್ದರಾಮಯ್ಯ(Siddaramaiah) ಮುಸಲ್ಮಾನರೇ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ(KS Eshwarappa)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಡಿಕೆ ಶಿವಕುಮಾರ್ ಮುಸಲ್ಮಾನರನ್ನು ಮೈ ಬ್ರದರ್ ಎಂದು ಕರೆದರು. ಇದರ ಅರ್ಥ ಏನು? ಮುಸ್ಲಿಂರನ್ನ ತೃಪ್ತಿ ಪಡಿಸಲು ಯಾವ ಮಟ್ಟಕ್ಕೆ ಹೋಗಲು ಅವರು ಸಿದ್ದರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಬ್ರದರ್ ಎನ್ನುವುದು ಏನಣ್ಣ ಚೆನ್ನಾಗಿದೀವಿ ಅನ್ನೋ ಅರ್ಥದಲ್ಲಿ. ವಯಸ್ಸದಾವರನ್ನು ಬ್ರದರ್ ಅಂತಾರೆ. ಸಿದ್ದರಾಮಯ್ಯರದ್ದು ಸ್ವಾರ್ಥ. ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಎಂದು ಕರೆಯುತ್ತಾರೆ. ಎಷ್ಟರ ಮಟ್ಟಿಗೆ ಸೊಕ್ಕು ಇರಬೇಕು ಎಂದು ಕಿಡಿಕಾರಿದರು.

ತೆಲಂಗಾಣದಲ್ಲಿ ಎಲ್ಲ ಮುಸ್ಲಿಮರು ಒಗ್ಗಟ್ಟಾಗಿ ಇರಿ ಎಂದರು. ಸೊಕ್ಕಿನ ಮಾತನ್ನು ಕಾಂಗ್ರೆಸ್ನವರು ‌ಮಾತಾಡಿದ್ದಾರೆ. ಇದನ್ನು ಸಿದ್ದರಾಮಯ್ಯ ಏನು ಮಾತನಾಡಿದ್ದೇನೆಂದು ಸಮರ್ಥನೆ ಮಾಡಿಕೊಂಡರು‌. ಸಿದ್ದರಾಮಯ್ಯ ಹಿಂದೆ ಹೀಗೆ ಮಾಡಿ ಅಧಿಕಾರ ಕಳೆದುಕೊಂಡರು. ಆದರೂ ಅವರಿಗೆ ಬುದ್ದಿ ಬಂದಿಲ್ಲ. ಸಿದ್ದರಾಮಯ್ಯ ಎಲ್ಲ ಸಮಾಜವನ್ನು ಮೈಮೇಲೆ ಎಳೆದುಕೊಂಡರು. ಜಾತಿ ಒಡೆದ ನಂತರ ಮುಸ್ಲಿಮರು ಮಾತ್ರ ಗತಿ ಎಂದು 10 ಸಾವಿರ ಕೋಟಿ ರೂಪಾಯಿ ಕೊಡುತ್ತೇನೆ ಎಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಸಮಾವೇಶದಲ್ಲಿ ಭಯೋತ್ಪಾದಕ ನಂಟು ಇರುವ ವ್ಯಕ್ತಿ ಜೊತ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿರುವ ವಿಚಾರದ ಬಗ್ಗೆ ಮಾತನಾಡಿ. ಅದು ಪ್ರೂವ್ ಆಗಬೇಕು,ಅದು ಅವರ ವಯಕ್ತಿಕ ವಿಚಾರ. ನಾವು ಮುಸ್ಲಿಮರ ವಿರೋಧಿ‌ ಅಲ್ಲ. ನಾವು ರಾಷ್ಟ್ರದ್ರೋಹಿ ಮುಸ್ಲಿಮರ ವಿರೋಧಿ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us