AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?

‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on: Sep 07, 2023 | 7:23 PM

Share

ಬೆಂಗಳೂರು, ಸೆಪ್ಟೆಂಬರ್ 7: ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ವಿವಾದಾತ್ಮಕ ‘ಸನಾತನ ಧರ್ಮ’ (Sanatana Dharma) ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್​​’ನಲ್ಲಿ (Twitter) ಸರಣಿ ಪೋಸ್ಟ್ ಮಾಡಿರುವ ಅವರು, ಮೋದಿ ಅವರ ಹೇಳಿಕೆ ಪ್ರಚೋದನಕಾರಿಯಾದುದು ಎಂದು ಉಲ್ಲೇಖಿಸಿದ್ದಾರೆ.

‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ. ವಿಷಯ – ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಮೋದೊ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ. ನರೇಂದ್ರ ಮೋದಿ ಅವರು ಇನ್ನೂ ಆರ್​​ಎಸ್ಎಸ್​ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಸಿದ್ದರಾಮಯ್ಯ ಎಕ್ಸ್​ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದ: ತಕ್ಕ ಉತ್ತರ ನೀಡಬೇಕು ಎಂದ ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ಧಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!