ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ವಿಚಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು?

ಕಮ್ಯುನಲ್ ಅಜೆಂಡಾ ಹಿಂದೆ ಸರ್ಕಾರ ಇದೆ. ಹಿಜಾಬ್, ಆಜಾನ್ ಇದೆಲ್ಲದರ ಹಿಂದೆ ಸರ್ಕಾರ ಇದೆ. ಹಿಜಾಬ್ ವಿವಾದ ಅರ್ಧ ಗಂಟೆಯಲ್ಲಿ ಪರಿಹರಿಸಬಹುದಿತ್ತು. ಅವರು ಧ್ರುವೀಕರಣಕ್ಕಾಗಿ ಈ ರೀತಿಯಾಗಿ ಮಾಡುತ್ತಿದ್ದಾರೆ.

ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ವಿಚಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು?
ಸಿದ್ದರಾಮಯ್ಯ
Follow us
|

Updated on:May 16, 2022 | 8:00 AM

ಉದಯಪುರ್: 2023ರ ಚುನಾವಣೆಗೆ ಕಾಂಗ್ರೆಸ್ (Congress) ಪಕ್ಷದಿಂದ ನಿಧಾನವಾಗಿ ತಯಾರಿ ನಡೆಯುತ್ತಿದೆ. ಈ ಬಾರಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಇದರ ಬಗ್ಗೆ ಪಕ್ಷದ ಕೆಲವರಿಗೆ ಅಸಮಧಾನ ಇದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಈ ಬಗ್ಗೆ ಪ್ರಸ್ತಾವನೆ ಇದೆ. ಆದರೆ, ಜಾರಿಗೊಳಿಸಬೇಕೆಂದಿಲ್ಲ. ಮುಂದಿನ ದಿನಗಳಲ್ಲಿ ಇದನ್ನ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಕ್ಕೆ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕಮ್ಯುನಲ್ ಅಜೆಂಡಾ ಹಿಂದೆ ಸರ್ಕಾರ ಇದೆ. ಹಿಜಾಬ್, ಆಜಾನ್ ಇದೆಲ್ಲದರ ಹಿಂದೆ ಸರ್ಕಾರ ಇದೆ. ಹಿಜಾಬ್ ವಿವಾದ ಅರ್ಧ ಗಂಟೆಯಲ್ಲಿ ಪರಿಹರಿಸಬಹುದಿತ್ತು. ಅವರು ಧ್ರುವೀಕರಣಕ್ಕಾಗಿ ಈ ರೀತಿಯಾಗಿ ಮಾಡುತ್ತಿದ್ದಾರೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಅವರಿಗೆ ಹೇಳಲು ಸಾಧನೆಗಳಿಲ್ಲ. ಹೀಗಾಗಿ ಧಾರ್ಮಿಕ, ಭಾವನಾತ್ಮಕ ವಿಷಯ ತರುತ್ತಿದ್ದಾರೆ. ನಾವು ಮತ್ತೆ ಜನ ಜಾಗರಣಾ ಹೋರಾಟ ಮಾಡುತ್ತೇವೆ. ಜೂ.15ರಿಂದ ಮತ್ತಷ್ಟು ತೀವ್ರವಾಗಿ ಹೋರಾಟ ಮಾಡುತ್ತೇವೆ. ಅಗಸ್ಟ್ 2 ರಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯಾತ್ರೆ ಮಾಡುತ್ತೇವೆ. ಈ ಬಿಜೆಪಿ ಸರ್ಕಾರದ ವೈಫಲ್ಯವನ್ನ ಜನರಿಗೆ ತಿಳಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ
Image
ರಾಜ್ಯದಲ್ಲಿ ಇಂದಿನಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ: ಶಾಲೆಗಳಲ್ಲಿ ಸಿಹಿ ವಿತರಿಸಿ ಮಕ್ಕಳ ಸ್ವಾಗತಕ್ಕೆ ತಯಾರಿ
Image
‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
Image
Vicky Kaushal Birthday: ವಿಕ್ಕಿ ಕೌಶಲ್​ಗೆ ಜನ್ಮದಿನ ಸಂಭ್ರಮ; ಕತ್ರಿನಾ ಕೈಫ್​ ಜತೆ ಮದುವೆ ಆದ ಬಳಿಕ ಮೊದಲ ಬರ್ತ್​ಡೇ
Image
Horoscope Today- ದಿನ ಭವಿಷ್ಯ; ವ್ಯಾಪಾರ ಮಾಡುವ ಈ ರಾಶಿಗೆ ಸೇರಿದವರು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ

70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಬೇಡ ಎಂಬ ವಿಚಾರದ ಬಗ್ಗೆ ಮಾತನಾಡಿರುವ ಸಿದ್ದು, ವ್ಯಕ್ತಿ ಆರೋಗ್ಯವಂತರಾಗಿದ್ದರೆ, ಫಿಸಿಕಲಿ ಫಿಟ್ ಆಗಿದ್ದರೆ ರಾಜಕೀಯ ಮಾಡಲು ಯಾವುದೇ ತೊಂದರೆ ಇಲ್ಲ. ಆರೋಗ್ಯ ಸರಿ ಇಲ್ಲದೆ ಇದ್ದರೆ ಅವರೇ ಹೊಗುತ್ತಾರೆ. ಯಾರನ್ನೂ ಬಲವಂತವಾಗಿ ನಿವೃತ್ತಿ ಹೊಂದಿ ಅನ್ನೋದು ಸರಿ ಅಲ್ಲ. ರಾಜಕಾರಣದಲ್ಲಿ ಯುವಕರು ಹಾಗೂ ಹಿರಿಯರು ಅನುಭವಿಗಳು ಇರಬೇಕು ಎಂದು ಅಭಿಪ್ರಾಯಪಟ್ಟರು. ನಾಯಕರ ಮಕ್ಕಳೇ ನಾಯಕರಾಗುತ್ತಾರೆ ಎಂಬ ವಿಚಾರದ ಬಗ್ಗೆ ಹೇಳಿಕೆ ನೀಡಿದ ಅವರು, ಜನ ಎಲ್ಲಿವರೆಗೆ ಸ್ವೀಕರಿಸುತ್ತಾರೆ, ಅಲ್ಲಿವರೆಗೆ ಕುಟುಂಬ ರಾಜಕಾರಣ ಅಂತಾ ಹೇಳೋಕೆ ಆಗಲ್ಲ ಎಂದರು.

ಹೆಚ್ಚಿನ ರಾಜಕೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Mon, 16 May 22

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ