AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ವಿಚಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು?

ಕಮ್ಯುನಲ್ ಅಜೆಂಡಾ ಹಿಂದೆ ಸರ್ಕಾರ ಇದೆ. ಹಿಜಾಬ್, ಆಜಾನ್ ಇದೆಲ್ಲದರ ಹಿಂದೆ ಸರ್ಕಾರ ಇದೆ. ಹಿಜಾಬ್ ವಿವಾದ ಅರ್ಧ ಗಂಟೆಯಲ್ಲಿ ಪರಿಹರಿಸಬಹುದಿತ್ತು. ಅವರು ಧ್ರುವೀಕರಣಕ್ಕಾಗಿ ಈ ರೀತಿಯಾಗಿ ಮಾಡುತ್ತಿದ್ದಾರೆ.

ಕಾಂಗ್ರೆಸ್​ನಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ವಿಚಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು?
ಸಿದ್ದರಾಮಯ್ಯ
Follow us
sandhya thejappa
|

Updated on:May 16, 2022 | 8:00 AM

ಉದಯಪುರ್: 2023ರ ಚುನಾವಣೆಗೆ ಕಾಂಗ್ರೆಸ್ (Congress) ಪಕ್ಷದಿಂದ ನಿಧಾನವಾಗಿ ತಯಾರಿ ನಡೆಯುತ್ತಿದೆ. ಈ ಬಾರಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಇದರ ಬಗ್ಗೆ ಪಕ್ಷದ ಕೆಲವರಿಗೆ ಅಸಮಧಾನ ಇದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಈ ಬಗ್ಗೆ ಪ್ರಸ್ತಾವನೆ ಇದೆ. ಆದರೆ, ಜಾರಿಗೊಳಿಸಬೇಕೆಂದಿಲ್ಲ. ಮುಂದಿನ ದಿನಗಳಲ್ಲಿ ಇದನ್ನ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಕ್ಕೆ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕಮ್ಯುನಲ್ ಅಜೆಂಡಾ ಹಿಂದೆ ಸರ್ಕಾರ ಇದೆ. ಹಿಜಾಬ್, ಆಜಾನ್ ಇದೆಲ್ಲದರ ಹಿಂದೆ ಸರ್ಕಾರ ಇದೆ. ಹಿಜಾಬ್ ವಿವಾದ ಅರ್ಧ ಗಂಟೆಯಲ್ಲಿ ಪರಿಹರಿಸಬಹುದಿತ್ತು. ಅವರು ಧ್ರುವೀಕರಣಕ್ಕಾಗಿ ಈ ರೀತಿಯಾಗಿ ಮಾಡುತ್ತಿದ್ದಾರೆ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಅವರಿಗೆ ಹೇಳಲು ಸಾಧನೆಗಳಿಲ್ಲ. ಹೀಗಾಗಿ ಧಾರ್ಮಿಕ, ಭಾವನಾತ್ಮಕ ವಿಷಯ ತರುತ್ತಿದ್ದಾರೆ. ನಾವು ಮತ್ತೆ ಜನ ಜಾಗರಣಾ ಹೋರಾಟ ಮಾಡುತ್ತೇವೆ. ಜೂ.15ರಿಂದ ಮತ್ತಷ್ಟು ತೀವ್ರವಾಗಿ ಹೋರಾಟ ಮಾಡುತ್ತೇವೆ. ಅಗಸ್ಟ್ 2 ರಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯಾತ್ರೆ ಮಾಡುತ್ತೇವೆ. ಈ ಬಿಜೆಪಿ ಸರ್ಕಾರದ ವೈಫಲ್ಯವನ್ನ ಜನರಿಗೆ ತಿಳಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ
Image
ರಾಜ್ಯದಲ್ಲಿ ಇಂದಿನಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ: ಶಾಲೆಗಳಲ್ಲಿ ಸಿಹಿ ವಿತರಿಸಿ ಮಕ್ಕಳ ಸ್ವಾಗತಕ್ಕೆ ತಯಾರಿ
Image
‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
Image
Vicky Kaushal Birthday: ವಿಕ್ಕಿ ಕೌಶಲ್​ಗೆ ಜನ್ಮದಿನ ಸಂಭ್ರಮ; ಕತ್ರಿನಾ ಕೈಫ್​ ಜತೆ ಮದುವೆ ಆದ ಬಳಿಕ ಮೊದಲ ಬರ್ತ್​ಡೇ
Image
Horoscope Today- ದಿನ ಭವಿಷ್ಯ; ವ್ಯಾಪಾರ ಮಾಡುವ ಈ ರಾಶಿಗೆ ಸೇರಿದವರು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ

70 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಬೇಡ ಎಂಬ ವಿಚಾರದ ಬಗ್ಗೆ ಮಾತನಾಡಿರುವ ಸಿದ್ದು, ವ್ಯಕ್ತಿ ಆರೋಗ್ಯವಂತರಾಗಿದ್ದರೆ, ಫಿಸಿಕಲಿ ಫಿಟ್ ಆಗಿದ್ದರೆ ರಾಜಕೀಯ ಮಾಡಲು ಯಾವುದೇ ತೊಂದರೆ ಇಲ್ಲ. ಆರೋಗ್ಯ ಸರಿ ಇಲ್ಲದೆ ಇದ್ದರೆ ಅವರೇ ಹೊಗುತ್ತಾರೆ. ಯಾರನ್ನೂ ಬಲವಂತವಾಗಿ ನಿವೃತ್ತಿ ಹೊಂದಿ ಅನ್ನೋದು ಸರಿ ಅಲ್ಲ. ರಾಜಕಾರಣದಲ್ಲಿ ಯುವಕರು ಹಾಗೂ ಹಿರಿಯರು ಅನುಭವಿಗಳು ಇರಬೇಕು ಎಂದು ಅಭಿಪ್ರಾಯಪಟ್ಟರು. ನಾಯಕರ ಮಕ್ಕಳೇ ನಾಯಕರಾಗುತ್ತಾರೆ ಎಂಬ ವಿಚಾರದ ಬಗ್ಗೆ ಹೇಳಿಕೆ ನೀಡಿದ ಅವರು, ಜನ ಎಲ್ಲಿವರೆಗೆ ಸ್ವೀಕರಿಸುತ್ತಾರೆ, ಅಲ್ಲಿವರೆಗೆ ಕುಟುಂಬ ರಾಜಕಾರಣ ಅಂತಾ ಹೇಳೋಕೆ ಆಗಲ್ಲ ಎಂದರು.

ಹೆಚ್ಚಿನ ರಾಜಕೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Mon, 16 May 22

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ