AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಹತೆ ಇರುವವರು ಸಿಎಂ ಕುರ್ಚಿಗೆ ಟವೆಲ್ ಹಾಕ್ತಾರೆ: ಡಿಕೆಶಿ ಪಕ್ಕದಲ್ಲಿದ್ದಾಗಲೇ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರ ಹೆಸರು ಇದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ರಮ ಬಯಲಿಗೆ ತಂದವರು ಸಿಎಂ ಕುರ್ಚಿಗೆ ಟವಲ್​ ಹಾಕಿದವರು ಎಂಬ ಕುಮಾರಸ್ವಾಮಿ ಹೇಳಿಕಗೆ ಸಿಎಂ ಟಾಂಗ್​ ಕೊಟ್ಟಿದ್ದಾರೆ.

ಅರ್ಹತೆ ಇರುವವರು ಸಿಎಂ ಕುರ್ಚಿಗೆ ಟವೆಲ್ ಹಾಕ್ತಾರೆ: ಡಿಕೆಶಿ ಪಕ್ಕದಲ್ಲಿದ್ದಾಗಲೇ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ|

Updated on:Jul 26, 2024 | 1:54 PM

Share

ಬೆಂಗಳೂರು ಜುಲೈ 26: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಬಯಲಾಗಿರುವುದು ಮುಖ್ಯಮಂತ್ರಿಗಳ ಕುರ್ಚಿಗೆ ಟವೆಲ್​​ ಹಾಕಿದವರಿಂದ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅಧಿಕಾರದಲ್ಲಿರುವ ಯಾರೂ ಬೇಕಾದರೂ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ ಜನರಿದ್ದಾರೆ. ಅರ್ಹತೆ ಇರುವವರು ಮುಖ್ಯಮಂತ್ರಿ ಆಗಲು ಟವೆಲ್ ಹಾಕುತ್ತಾರೆ. ಟವೆಲ್​ ಹಾಕಿದವರು ಯಾರು ಅಂತ ಹೆಚ್​ಡಿ ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಸಿದ್ದರಾಮಯ್ಯ ಟಾಂಗ್​ ಕೊಟ್ಟರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವರದಿ ಕೇಳಿದ್ದಾರೆ, ಕೊಡುತ್ತೇವೆ. ಎಲ್ಲವೂ ಕಾನೂನು ಪ್ರಕಾರ ನಡೆದಿದೆ ಅಂತ ವರದಿ ನೀಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಸೋಮವಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಜೆಡಿಎಸ್ ಪಾದಯಾತ್ರೆ ಬಹುತೇಕ ಫಿಕ್ಸ್

ನಮ್ಮ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮವಾಗಿ ಬಳಸಿಕೊಂಡಿದ್ದೇ ತಪ್ಪು. ವಿಜಯನಗರ ಬಡಾವಣೆಯಲ್ಲಿ 125 ಸೈಟ್​ಗಳನ್ನು ಹಂಚಿದ್ದಾರೆ. ಅದರಲ್ಲಿ ನಮಗೂ ನಿವೇಶನ ಕೊಟ್ಟಿದ್ದಾರೆ ಅಷ್ಟೇ. ನನ್ನದಾಗಲಿ, ನನ್ನ ಪತ್ನಿಯದಾಗಲಿ, ಬಾಮೈದನ ಪಾತ್ರ ಇದೆಯಾ? 2014ರಲ್ಲಿ ನನ್ನ ಬಾಮೈದ ಜಮೀನು ಖರೀದಿ ಮಾಡಿರುವುದು. ಸಂಪೂರ್ಣವಾಗಿ ಕಾನೂನು ಪ್ರಕಾರ ಸೈಟ್​ ಹಂಚಿಕೆ ಮಾಡಿದ್ದಾರೆ ಎಂದು ತಿಳಿಸಿದರು.

ಆದರೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸ್ತಿದ್ದಾರೆ. ನಾನು ಎರಡನೇ ಬಾರಿಗೆ ಸಿಎಂ ಆಗಿದ್ದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ನಿವೃತ್ತ ನ್ಯಾ. ದೇಸಾಯಿ ಅಧ್ಯಕ್ಷತೆಯಲ್ಲಿ ತನಿಖೆ ಮಾಡಿಸುತ್ತಿದ್ದೇವೆ ಎಂದರು.

2023ರ ವಿಧಾಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್​ ವಿಜಯಶಾಲಿಯಾದ ಮೇಲೆ ಮುಖ್ಯಮಂತ್ರಿ ಗುದ್ದುಗೆ ಮೇಲೆ ಕೂರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ನಡುವೆ ಮುಸುಕಿನ ಗುದ್ದಾಟ ಶುರುವಾಗಿತ್ತು. ದೆಹಲಿ ಹೈಕಮಾಂಡ್​ ಅಂಗಳದಲ್ಲಿ ಸಭೆ ಮೇಲೆ ಸಭೆ ನಡೆದು ದೊಡ್ಡ ಹೈಡ್ರಾಮಾ ಸೃಷ್ಟಿಯಾಗಿತ್ತು. ಇಬ್ಬರು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಕೊನೆಗೆ ಮುಖ್ಯಮಂತ್ರಿ ಕುರ್ಚಿ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಆದರೆ ಸಿಎಂ ಕುರ್ಚಿ ಮೇಲೆ ಡಿಕೆ ಶಿವಕುಮಾರ್​ ಇನ್ನೂ ಕಣ್ಣಿಟ್ಟಿದ್ದು, ಇದೇ ಅವಧಿಯಲ್ಲಿ ಸಿಎಂ ಆಗುವ ಕನಸು ಕಂಡಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:46 pm, Fri, 26 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ