AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ತಪ್ಪಿನಿಂದ ಬಚಾವ್ ಆಗಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ; ಸಿದ್ದರಾಮಯ್ಯ ಹೇಳಿಕೆ

ಬೆಳ್ತಂಗಡಿಯಲ್ಲಿ ದಿನೇಶ್ ಕೊಲೆ ನಡೆಯಿತು. ಆತನ ಕೊಲೆ ಮಾಡಿದ್ದು ಭಜರಂಗದಳದವರು. ನರಗುಂದದಲ್ಲಿ ಒಬ್ಬ ಮುಸ್ಲಿಂ ಕೊಲೆ ನಡೆಯಿತು. ಅವನ್ನು ಕೊಲೆ ಮಾಡಿದ್ದು ಶ್ರೀರಾಮ ಸೇನೆಯವರು.

ಬಿಜೆಪಿಯವರು ತಪ್ಪಿನಿಂದ ಬಚಾವ್ ಆಗಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ; ಸಿದ್ದರಾಮಯ್ಯ ಹೇಳಿಕೆ
ಸಿದ್ದರಾಮಯ್ಯ
TV9 Web
| Edited By: sandhya thejappa|

Updated on:Apr 24, 2022 | 2:04 PM

Share

ಶಿವಮೊಗ್ಗ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಬಿಜೆಪಿ ನಾಯಕರು ತಪ್ಪಿನಿಂದ ಬಚಾವ್ ಆಗಲು ಕಾಂಗ್ರೆಸ್ (Congress) ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಬೇಡ. ಪ್ರಕರಣದಲ್ಲಿ ಯಾರೇ ಇರಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಕಲಬುರಗಿ ನಗರದ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ. ಬಿಜೆಪಿ ನಾಯಕಿಗೆ ಸೇರಿದ ಶಾಲೆಯಲ್ಲಿ ಅಕ್ರಮ ನಡೆದಿದೆ. ಆಕೆ ತಲೆಮರೆಸಿಕೊಂಡಿದ್ದಾರೆ, ಪತಿಯನ್ನು ಬಂಧಿಸಲಾಗಿದೆ ಎಂದರು.

ಇನ್ನು ಇದೇ ವೇಳೆ ಹರ್ಷ ಕೊಲೆ ಪ್ರಕರಣದ ಬಗ್ಗೆಯೂ ಹೇಳಿಕೆ ನೀಡಿದ ಸಿದ್ದರಾಮಯ್ಯ, ಗಲಾಟೆ ಮಾಡಿದ್ದು, ಶವ ಯಾತ್ರೆ ಮಾಡಿದ್ದು, ಅವರಿಗೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಹರ್ಷ ಕೊಲೆ ಖಂಡಿಸಿರುವೆ. ಕೊಲೆಗಾರರು ಯಾರೆ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚಬಾರದು ಎಂದರು.

ಬೆಳ್ತಂಗಡಿಯಲ್ಲಿ ದಿನೇಶ್ ಕೊಲೆ ನಡೆಯಿತು. ಆತನ ಕೊಲೆ ಮಾಡಿದ್ದು ಭಜರಂಗದಳದವರು. ನರಗುಂದದಲ್ಲಿ ಒಬ್ಬ ಮುಸ್ಲಿಂ ಕೊಲೆ ನಡೆಯಿತು. ಅವನ್ನು ಕೊಲೆ ಮಾಡಿದ್ದು ಶ್ರೀರಾಮ ಸೇನೆಯವರು. ಈ ಕುಟುಂಬಕ್ಕೆ ಎಷ್ಟು ಲಕ್ಷ ಪರಿಹಾರ ಕೊಟ್ಟರಿ? ನಯಾ ಪೈಸಾ ಅವರಿಗೆ ಪರಿಹಾರ ಕೊಟ್ಟಿಲ್ಲ ಅಂತ ವಾಗ್ದಾಳಿ ನಡೆಸಿದರು.

ಯಾವುದೇ ಸಂದರ್ಭದಲ್ಲಿ ಚುನಾವಣೆ ಆದರೆ ನಾವು ಎದುರಿಸಲು ರೆಡಿ. ಚುನಾವಣೆ ಸಿದ್ಧತೆಗಳು ನಡೆಯುತ್ತಿವೆ. ಭ್ರಷ್ಟಾಚಾರವೇ ಅತೀ ದೊಡ್ಡ ಚುನಾವಣೆ ವಿಚಾರ ಆಗಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಈಗ ಈಶ್ವರಪ್ಪ ಯಾಕೇ ರಾಜೀನಾಮೆ ಕೊಟ್ಟರು? ಸುಮ್ಮ ಸುಮ್ಮನೆ ಖುಷಿಗೆ ರಾಜೀನಾಮೆ ಕೊಟ್ಟರಾ? ಶಿವಮೊಗ್ಗ ಸೇರಿದಂತೆ ಎಲ್ಲಿಯೂ ಪಕ್ಷದಲ್ಲಿ ಅಸಮಾಧಾನ ಇಲ್ಲ. ಮೊದಲು ಶ್ರೀರಾಮ್ ಸೇನೆ, ಬಜರಂಗದಳ, ಹಿಂದೂ ಮಹಾಸಭಾ ಇವರಿಗೆ ಬುಲ್ಡೋಜರ್ ಮಾಡಬೇಕು ಅಂತ ಸಿದ್ದರಾಮಯ್ಯ ಹೇಳಿದರು.

ಹಿಜಾಬ್, ಹಲಾಲ್, ಜಟ್ಕಾ, ಅಜಾನ್ ಈ ವಿಚಾರ ಹುಟ್ಟಿ ಹಾಕಿದ್ದು ಯಾರು? ರಾಜ್ಯದಲ್ಲಿ ಅಶಾಂತಿ  ಮಾಡುತ್ತಿರುವವರು ಯಾರು? ಧಾರ್ಮಿಕ ವಿಚಾರ ಕೆರಳಿಸಿ, ಜನರ ಭಾವನೆ ಕೆರಳಿಸವುದು. ಸಂಘ ಪರಿಹಾರದವರು  ಈ ಎಲ್ಲ ಕೆಲಸ ಮಾಡಿದ್ದಾರೆ. ಬಜರಂಗದಳ, ಶ್ರೀರಾಮ್ ಸೇನೆ, ಆರ್​ಎಸ್ಎಸ್ ಇವರಿಂದ ಅಶಾಂತಿ ವಾತಾವರಣ  ನಿರ್ಮಾಣವಾಗಿದೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

Yes Bank Scam ಪ್ರಿಯಾಂಕಾ ಗಾಂಧಿಯಿಂದ ಎಂಎಫ್ ಹುಸೇನ್ ಪೇಂಟಿಂಗ್ ಖರೀದಿಸುವಂತೆ ಒತ್ತಾಯಿಸಲಾಯಿತು, ಅದಕ್ಕೆ 2 ಕೋಟಿ ಪಾವತಿಸಿದ್ದೇನೆ: ರಾಣಾ ಕಪೂರ್

WhatsApp: ಮುಂದಿನ ಅಪ್ಡೇಟ್​​ಗೆ ವಾಟ್ಸ್​ಆ್ಯಪ್ ಗ್ರೂಪ್​ ಕಾಲ್​ನಲ್ಲಿ ಬರಲಿದೆ ಅಚ್ಚರಿಯ ಫೀಚರ್

Published On - 2:01 pm, Sun, 24 April 22

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ