AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

ಕಿರಣ್​ ಹನಿಯಡ್ಕ
| Edited By: |

Updated on: Jul 05, 2023 | 2:00 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

Follow Us
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ