AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

ಕಿರಣ್​ ಹನಿಯಡ್ಕ
| Edited By: |

Updated on: Jul 05, 2023 | 2:00 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ