AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on: Jul 05, 2023 | 2:00 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?