AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

ಕಿರಣ್​ ಹನಿಯಡ್ಕ
| Edited By: |

Updated on: Jul 05, 2023 | 2:00 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

Follow Us
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು