AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಸಿದ್ದರಾಮಯ್ಯ ಒಂದು ಡೈಲಾಗ್​ ಹೊಡೆದಿದ್ದಾರೆ. ಇದರಿಂದ ಯತ್ನಾಳ್ ಗಪ್​ಚುಪ್ ಆದರು.

ಕಿರಣ್​ ಹನಿಯಡ್ಕ
| Edited By: |

Updated on: Jul 05, 2023 | 2:00 PM

Share

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: 30 ವರ್ಷದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ಕಲಾಪ: ಹೈಕಮಾಂಡ್ ಕೈ ಸೇರಿದ ವರದಿ, ಇಂದೇ ಘೋಷಣೆ ಸಾಧ್ಯತೆ

ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.

ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?