AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:May 18, 2023 | 3:48 PM

Share

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟಿನ್​​​ಗಳಿಗೆ ಮರುಜೀವ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.

ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಮರುಜೀವ ನೀಡಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಕ್ಯಾಂಟಿನ್​ಗಳನ್ನು ಮುಚ್ಚಿಸುವ ಹುನ್ನರ ಮಾಡಲಾಗಿತ್ತು. ಆದರೆ, ಅದನ್ನು ತಡೆಯಲಾಗಿದೆ. ಆದಾಗ್ಯೂ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್​​ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು ಎಂದು ಅವರು ದೂರಿದ್ದಾರೆ.

ಈ ಮಧ್ಯೆ, ಮತ್ತೆ ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ರಾಜ್ಯದೇಲ್ಲೆಡೆ ತೆರೆಯಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್​​​​ಗಳು ಆಗ್ರಹಿಸಿದ್ದಾರೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 18 May 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ