Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್​ಗೆ ಸಿಗಲಿದೆ ಮರುಜೀವ
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
Follow us
Ganapathi Sharma
|

Updated on:May 18, 2023 | 3:48 PM

ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಗರದೆಲ್ಲೆಡೆ ಆರಂಭಿಸಲಾಗಿದ್ದ, ಅವರ ಕನಸಿನ ಕೂಸಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಮರುಜೀವ ದೊರೆಯುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಖಚಿತವಾಗುತ್ತಿದ್ದಂತೆಯೇ ಇಂದಿರಾ ಕ್ಯಾಂಟಿನ್​​​ಗಳಿಗೆ ಮರುಜೀವ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಹುತೇಕ ಕ್ಯಾಂಟೀನ್​ಗಳು ಮುಚ್ಚಲ್ಪಟ್ಟಿದ್ದರೆ, ಅನೇಕ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.

ಮಾಜಿ ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿಗೆ ಮರುಜೀವ ನೀಡಬೇಕು ಎಂದು ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಕ್ಯಾಂಟಿನ್​ಗಳನ್ನು ಮುಚ್ಚಿಸುವ ಹುನ್ನರ ಮಾಡಲಾಗಿತ್ತು. ಆದರೆ, ಅದನ್ನು ತಡೆಯಲಾಗಿದೆ. ಆದಾಗ್ಯೂ ಕ್ಯಾಂಟೀನ್​ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನದ ಊಟ ಸಿಗುತ್ತಿತ್ತು. ಕೇವಲ 10 ರೂಪಾಯಿಗೆ ಬಡ ಜನರಿಗೆ ಊಟ ಸಿಗುತ್ತಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ರಾಜ್ಯದ ಎಲ್ಲಾ ಕ್ಯಾಂಟಿನ್​​ಗಳಿಗೆ ಅನುದಾನ ನೀಡಲಾಗಿತ್ತು. ಅದ್ರೆ ಬಿಜೆಪಿ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಕಡೆ ಅನುದಾನ ಕೊಡದೆ ಕ್ಯಾಂಟಿನ್ ಬಂದ್ ಮಾಡಲಾಗಿತ್ತು ಎಂದು ಅವರು ದೂರಿದ್ದಾರೆ.

ಈ ಮಧ್ಯೆ, ಮತ್ತೆ ಬಡವರ ಪಾಲಿನ ಇಂದಿರಾ ಕ್ಯಾಂಟಿನ್ ರಾಜ್ಯದೇಲ್ಲೆಡೆ ತೆರೆಯಲು ಸಿದ್ಧತೆ ನಡೆಸಲಾಗಿದೆ. ಇದಕ್ಕೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್​​​​ಗಳು ಆಗ್ರಹಿಸಿದ್ದಾರೆ. ಸರ್ಕಾರ ರಚನೆಯಾಗುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 18 May 23

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!